ಬ್ರೇಕಿಂಗ್ ನ್ಯೂಸ್
08-09-20 05:56 pm Mangalore Reporter ಕರಾವಳಿ
ಮಂಗಳೂರು, ಸೆ.8: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಂತಿ ಹಬ್ಬ (ತೆನೆ ಹಬ್ಬ) ವನ್ನು ಕೊರೋನ ಹಿನ್ನೆಲೆಯಲ್ಲಿ ಇಂದು ಸರಳತೆಯೊಂದಿಗೆ ಆಚರಿಸಿದರು.
ಹಸಿರು ಹಾಗೂ ಸಮೃದ್ಧಿಯ ಪ್ರತೀಕವಾಗಿ ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ. 8ನ್ನು ಮೊಂತಿ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಬಾರಿ ಕೊರೊನ ಹಿನ್ನೆಲೆಯಲ್ಲಿ ಅತ್ಯಂತ ಸರಳ ಹಾಗೂ ಮುಂಜಾಗೃತಾ ಕ್ರಮಗಳೊಂದಿಗೆ ದ.ಕ. ಜಿಲ್ಲೆಯ ಎಲ್ಲಾ ಚರ್ಚ್ಗಳಲ್ಲಿ ಬಲಿಪೂಜೆಯೊಂದಿಗೆ ಮೊಂತಿ ಹಬ್ಬವನ್ನು ಆಚರಿಸಲಾಯಿತು.

ಮಂಗಳೂರಿನ ರೊಸೋರಿಯೋ ಕೆಥಡ್ರಲ್ನಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಬಲಿಪೂಜೆ ನೆರವೇರಿಸಿದರು. ಅವರು ಸಂದೇಶ ನೀಡಿ, ದೇವರು ಸೃಷ್ಟಿ ಹಾಗೂ ಮನುಜ ಕುಲವನ್ನು ವಿಶೇಷಿವಾಗಿ ಪ್ರೀತಿಸುತ್ತಾರೆ. ಇಂತಹ ಸೃಷ್ಟಿಯ ಪೋಷಣೆ ಜತೆಗೆ ಮನುಜ ಕುಲ ಅದರ ಉತ್ತಮ ನಿರ್ವಹಣೆಯನ್ನು ಮಾಡಬೇಕು ಎಂಬ ಸಂದೇಶ ಈ ಹಬ್ಬದ್ದಾಗಿದೆ ಎಂದರು.
ಕ್ರೈಸ್ತ ಸಮುದಾಯ ಪತ್ರಿಕೆ ಓದುವ ವಿಚಾರದಲ್ಲಿ ತೀರಾ ಹಿಂದಿದೆ. ಯಾವುದೇ ಭಾಷೆಯ ಪತ್ರಿಕೆಗಳು ಇರಲಿ ಅದನ್ನು ಓದುವ ಪ್ರವೃತ್ತಿ ಬೆಳೆಸಬೇಕು. ಈ ಮೂಲಕ ಜ್ಞಾನ ಸಂಪಾದನೆ, ಸಮಾಜದಲ್ಲಿ ನಡೆಯುವ ವಿಚಾರಗಳ ಅರಿವು, ಸರಕಾರದ ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡು ಅದನ್ನು ಸಮುದಾಯದಲ್ಲಿ ಬಳಸಿಕೊಳ್ಳುವ ಕೆಲಸವಾಬೇಕು ಎಂದು ಅವರು ಹೇಳಿದರು.
ಬಲಿಪೂಜೆಯಲ್ಲಿ ರೊಸಾರಿಯೊ ಕೆಥಡ್ರಲ್ನ ಪ್ರಧಾನ ಧರ್ಮಗೂರು ಫಾ. ಅಲ್ಪ್ರೆಡ್ ಪಿಂಟೋ, ಸಹಾಯಕ ಧರ್ಮಗುರುಗಳಾದ ಫಾ. ವಿನೋದ್ ಲೋಬೋ, ಫಾ. ವಿಕ್ಟರ್ ಡಿಸೋಜಾ, ಗ್ಲಾಡ್ಸಮ್ ಮೈನರ್ ಸೆಮಿನರಿಯ ರೆಕ್ಟರ್ ಫಾ. ಅನಿಲ್ ಐವನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am