ಬ್ರೇಕಿಂಗ್ ನ್ಯೂಸ್
08-09-20 05:56 pm Mangalore Reporter ಕರಾವಳಿ
ಮಂಗಳೂರು, ಸೆ.8: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಂತಿ ಹಬ್ಬ (ತೆನೆ ಹಬ್ಬ) ವನ್ನು ಕೊರೋನ ಹಿನ್ನೆಲೆಯಲ್ಲಿ ಇಂದು ಸರಳತೆಯೊಂದಿಗೆ ಆಚರಿಸಿದರು.
ಹಸಿರು ಹಾಗೂ ಸಮೃದ್ಧಿಯ ಪ್ರತೀಕವಾಗಿ ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ. 8ನ್ನು ಮೊಂತಿ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಬಾರಿ ಕೊರೊನ ಹಿನ್ನೆಲೆಯಲ್ಲಿ ಅತ್ಯಂತ ಸರಳ ಹಾಗೂ ಮುಂಜಾಗೃತಾ ಕ್ರಮಗಳೊಂದಿಗೆ ದ.ಕ. ಜಿಲ್ಲೆಯ ಎಲ್ಲಾ ಚರ್ಚ್ಗಳಲ್ಲಿ ಬಲಿಪೂಜೆಯೊಂದಿಗೆ ಮೊಂತಿ ಹಬ್ಬವನ್ನು ಆಚರಿಸಲಾಯಿತು.

ಮಂಗಳೂರಿನ ರೊಸೋರಿಯೋ ಕೆಥಡ್ರಲ್ನಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಬಲಿಪೂಜೆ ನೆರವೇರಿಸಿದರು. ಅವರು ಸಂದೇಶ ನೀಡಿ, ದೇವರು ಸೃಷ್ಟಿ ಹಾಗೂ ಮನುಜ ಕುಲವನ್ನು ವಿಶೇಷಿವಾಗಿ ಪ್ರೀತಿಸುತ್ತಾರೆ. ಇಂತಹ ಸೃಷ್ಟಿಯ ಪೋಷಣೆ ಜತೆಗೆ ಮನುಜ ಕುಲ ಅದರ ಉತ್ತಮ ನಿರ್ವಹಣೆಯನ್ನು ಮಾಡಬೇಕು ಎಂಬ ಸಂದೇಶ ಈ ಹಬ್ಬದ್ದಾಗಿದೆ ಎಂದರು.
ಕ್ರೈಸ್ತ ಸಮುದಾಯ ಪತ್ರಿಕೆ ಓದುವ ವಿಚಾರದಲ್ಲಿ ತೀರಾ ಹಿಂದಿದೆ. ಯಾವುದೇ ಭಾಷೆಯ ಪತ್ರಿಕೆಗಳು ಇರಲಿ ಅದನ್ನು ಓದುವ ಪ್ರವೃತ್ತಿ ಬೆಳೆಸಬೇಕು. ಈ ಮೂಲಕ ಜ್ಞಾನ ಸಂಪಾದನೆ, ಸಮಾಜದಲ್ಲಿ ನಡೆಯುವ ವಿಚಾರಗಳ ಅರಿವು, ಸರಕಾರದ ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡು ಅದನ್ನು ಸಮುದಾಯದಲ್ಲಿ ಬಳಸಿಕೊಳ್ಳುವ ಕೆಲಸವಾಬೇಕು ಎಂದು ಅವರು ಹೇಳಿದರು.
ಬಲಿಪೂಜೆಯಲ್ಲಿ ರೊಸಾರಿಯೊ ಕೆಥಡ್ರಲ್ನ ಪ್ರಧಾನ ಧರ್ಮಗೂರು ಫಾ. ಅಲ್ಪ್ರೆಡ್ ಪಿಂಟೋ, ಸಹಾಯಕ ಧರ್ಮಗುರುಗಳಾದ ಫಾ. ವಿನೋದ್ ಲೋಬೋ, ಫಾ. ವಿಕ್ಟರ್ ಡಿಸೋಜಾ, ಗ್ಲಾಡ್ಸಮ್ ಮೈನರ್ ಸೆಮಿನರಿಯ ರೆಕ್ಟರ್ ಫಾ. ಅನಿಲ್ ಐವನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm