ಬ್ರೇಕಿಂಗ್ ನ್ಯೂಸ್
13-09-21 11:59 am Mangaluru Correspondent ಕರಾವಳಿ
ಮಂಗಳೂರು, ಸೆ.13: ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹವು ತಣ್ಣೀರುಬಾವಿ ಬೀಚ್ ಸಮೀಪ ರವಿವಾರ ರಾತ್ರಿ ವೇಳೆ ಪತ್ತೆಯಾಗಿದೆ.
ಕಸಬಾ ಬೆಂಗರೆ ನಿವಾಸಿ ಮುಹಮ್ಮದ್ ಶರೀಫ್ (35) ಎಂಬವರ ಮೃತದೇಹ ಪತ್ತೆಯಾಗಿದೆ.
ಸೆ.11ರಂದು ನಸುಕಿನಜಾವ ಮೀನುಗಾರಿಕೆಗೆ ತೆರಳಿದ್ದ ಐವರ ಪೈಕಿ ನಾಲ್ವರು ರಕ್ಷಣೆಗೊಳಗಾಗಿದ್ದರು. ಆದರೆ ಶರೀಫ್ ನಾಪತ್ತೆಯಾಗಿದ್ದರು. ಇವರಿಗಾಗಿ ಕಳೆದ ಎರಡು ದಿನಗಳಿಂದ ತೀವ್ರ ಶೋಧ ಕಾರ್ಯ ನಡೆದಿತ್ತು. ಶನಿವಾರ ಕಡಲು ಪ್ರಕ್ಷುಬ್ಧತೆಯಿಂದ ಕೂಡಿದ್ದರಿಂದ ಇಡೀ ದಿನ ಹುಡುಕಾಟ ನಡೆದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ರವಿವಾರವೂ ಪತ್ತೆ ಕಾರ್ಯ ಮುಂದುವರಿದಿತ್ತು. ಸಂಜೆ ವೇಳೆ ಸ್ಥಳೀಯ ಮುಳುಗುತಜ್ಞರ ಶ್ರಮದಿಂದಾಗಿ ಕೊನೆಗೂ ಶರೀಫ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೀನುಗಾರ ಶರೀಫ್ ನಾಪತ್ತೆಯಾಗಿದ್ದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಮುದ್ರದಲ್ಲಿ ಕಬ್ಬಿಣದ ಪೈಪುಗಳು: ನಾಪತ್ತೆಯಾಗಿದ್ದ ಶರೀಫ್ ಅವರಿಗಾಗಿ ಸತತ ಎರಡು ದಿನಗಳಿಂದ ಪತ್ತೆ ಕಾರ್ಯ ನಡೆದಿತ್ತು. ಹುಡುಕಾಟಕ್ಕೆ ಸಮುದ್ರಕ್ಕೆ ಧುಮುಕಿದ ಡಿವೈಎಫ್ಐ ಕಾರ್ಯಕರ್ತ ಮಯ್ಯದ್ದಿ ಎಂಬವರ ಕಾಲಿಗೆ ಗಂಭೀರ ಗಾಯವಾಗಿದೆ. ಕಡಲಲ್ಲಿ ಕಬ್ಬಿಣದ ಪೈಪುಗಳು ಇದ್ದವು ಎಂದು ಆರೋಪಿಸಲಾಗಿದೆ. ಗಾಯಾಳು ಮಯ್ಯದ್ದಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Read: ಪಣಂಬೂರು ತೀರದಲ್ಲಿ ಗಿಲ್ ನೆಟ್ ಬೋಟ್ ಪಲ್ಟಿ ; ಒಬ್ಬ ಮೀನುಗಾರ ಸಮುದ್ರಪಾಲು
Panambur Gill net boat Accident missing fishermen body found in Tannirbhavi beach. The deceased has been identified as Sharrif (35).
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm