ಬ್ರೇಕಿಂಗ್ ನ್ಯೂಸ್
13-09-21 11:59 am Mangaluru Correspondent ಕರಾವಳಿ
ಮಂಗಳೂರು, ಸೆ.13: ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹವು ತಣ್ಣೀರುಬಾವಿ ಬೀಚ್ ಸಮೀಪ ರವಿವಾರ ರಾತ್ರಿ ವೇಳೆ ಪತ್ತೆಯಾಗಿದೆ.
ಕಸಬಾ ಬೆಂಗರೆ ನಿವಾಸಿ ಮುಹಮ್ಮದ್ ಶರೀಫ್ (35) ಎಂಬವರ ಮೃತದೇಹ ಪತ್ತೆಯಾಗಿದೆ.
ಸೆ.11ರಂದು ನಸುಕಿನಜಾವ ಮೀನುಗಾರಿಕೆಗೆ ತೆರಳಿದ್ದ ಐವರ ಪೈಕಿ ನಾಲ್ವರು ರಕ್ಷಣೆಗೊಳಗಾಗಿದ್ದರು. ಆದರೆ ಶರೀಫ್ ನಾಪತ್ತೆಯಾಗಿದ್ದರು. ಇವರಿಗಾಗಿ ಕಳೆದ ಎರಡು ದಿನಗಳಿಂದ ತೀವ್ರ ಶೋಧ ಕಾರ್ಯ ನಡೆದಿತ್ತು. ಶನಿವಾರ ಕಡಲು ಪ್ರಕ್ಷುಬ್ಧತೆಯಿಂದ ಕೂಡಿದ್ದರಿಂದ ಇಡೀ ದಿನ ಹುಡುಕಾಟ ನಡೆದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ರವಿವಾರವೂ ಪತ್ತೆ ಕಾರ್ಯ ಮುಂದುವರಿದಿತ್ತು. ಸಂಜೆ ವೇಳೆ ಸ್ಥಳೀಯ ಮುಳುಗುತಜ್ಞರ ಶ್ರಮದಿಂದಾಗಿ ಕೊನೆಗೂ ಶರೀಫ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.

ಮೀನುಗಾರ ಶರೀಫ್ ನಾಪತ್ತೆಯಾಗಿದ್ದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಮುದ್ರದಲ್ಲಿ ಕಬ್ಬಿಣದ ಪೈಪುಗಳು: ನಾಪತ್ತೆಯಾಗಿದ್ದ ಶರೀಫ್ ಅವರಿಗಾಗಿ ಸತತ ಎರಡು ದಿನಗಳಿಂದ ಪತ್ತೆ ಕಾರ್ಯ ನಡೆದಿತ್ತು. ಹುಡುಕಾಟಕ್ಕೆ ಸಮುದ್ರಕ್ಕೆ ಧುಮುಕಿದ ಡಿವೈಎಫ್ಐ ಕಾರ್ಯಕರ್ತ ಮಯ್ಯದ್ದಿ ಎಂಬವರ ಕಾಲಿಗೆ ಗಂಭೀರ ಗಾಯವಾಗಿದೆ. ಕಡಲಲ್ಲಿ ಕಬ್ಬಿಣದ ಪೈಪುಗಳು ಇದ್ದವು ಎಂದು ಆರೋಪಿಸಲಾಗಿದೆ. ಗಾಯಾಳು ಮಯ್ಯದ್ದಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Read: ಪಣಂಬೂರು ತೀರದಲ್ಲಿ ಗಿಲ್ ನೆಟ್ ಬೋಟ್ ಪಲ್ಟಿ ; ಒಬ್ಬ ಮೀನುಗಾರ ಸಮುದ್ರಪಾಲು
Panambur Gill net boat Accident missing fishermen body found in Tannirbhavi beach. The deceased has been identified as Sharrif (35).
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm