ಬ್ರೇಕಿಂಗ್ ನ್ಯೂಸ್
13-09-21 08:46 pm Mangaluru Correspondent ಕರಾವಳಿ
ಮಂಗಳೂರು ಸೆ.13 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡೆಗೂ ಶಾಲೆ ಆರಂಭಿಸಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ. ಕೋವಿಡ್ ನಿಯಮ ಪಾಲಿಸಿಕೊಂಡು ಸೆ.17 ರಿಂದ ಶಾಲೆಗಳನ್ನು ತೆರೆಯುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.
ಸೆಪ್ಟೆಂಬರ್ 17ರಂದು 8, 9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ, ಸೆಪ್ಟೆಂಬರ್ 20 ರಂದು 6 ಮತ್ತು 7ನೇ ತರಗತಿಗಳನ್ನು ಆರಂಭಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಜೊತೆಗೆ ಎಲ್ಲಾ ಪ್ರಥಮ ಪಿ.ಯು.ಸಿ ತರಗತಿಗಳನ್ನು ಕೂಡ ಇದೇ ವೇಳೆ ಆರಂಭಿಸುವಂತೆ ಎಲ್ಲ ಕಾಲೇಜುಗಳಿಗೂ ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಶೇ.99 ರಷ್ಟು ಶಾಲಾ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳಿಗೆ ಲಸಿಕೆಯನ್ನು ನೀಡಲಾಗಿದೆ. ಇತರ ಬಾಕಿ ಇರುವ ಸಿಬಂದಿ ಕೂಡಲೇ ಲಸಿಕೆ ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಇದಲ್ಲದೆ, ಜಿಲ್ಲೆಯಲ್ಲಿ ಸದ್ಯಕ್ಕೆ 261 ಮಕ್ಕಳು ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದು ಮಕ್ಕಳಲ್ಲಿ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಸೂಕ್ತ ಚಿಕಿತ್ಸೆ ನೀಡಬೇಕು. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕಂಡುಹಿಡಿದು ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದರು.
ಶಾಲೆಗಳನ್ನು ಆರಂಭಿಸಿದ ನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಶಿಕ್ಷಕರು ಸೂಕ್ತ ಮುಂಜಾಗ್ರತೆ ವಹಿಸಬೇಕು. ಶಾಲೆ ಆರಂಭದ ನೆಪದಲ್ಲಿ ಮಕ್ಕಳಲ್ಲಿ ಶುಲ್ಕ ಪಾವತಿಸಲು ಯಾವುದೇ ಶಾಲಾಡಳಿತಗಳು ಒತ್ತಾಯಿಸಬಾರದೆಂದು ತಿಳಿಸಿದರು. ಶಾಲೆಗಳು ಆರಂಭವಾದ ಬಳಿಕವೂ ಭೌತಿಕ ತರಗತಿ ಜೊತೆಗೆ ಆನ್ಲೈನ್ ತರಗತಿಗಳನ್ನು ಕೂಡ ಮುಂದುವರೆಸಬೇಕು. ಭೌತಿಕ ತರಗತಿಗಳಿಗೆ ಹಾಜರಾಗುವ ಸಂಬಂಧ ವಿದ್ಯಾರ್ಥಿಗಳು ಪೋಷಕರ ಅನುಮತಿಯನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.
ಕೇರಳದಿಂದ ಬರುವ ಮಕ್ಕಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಉಳಿದುಕೊಳ್ಳುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ಆನ್ಲೈನ್ ಮೂಲಕ ತರಗತಿಗಳನ್ನು ತೆಗೆದುಕೊಳ್ಳಬೇಕೆಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಎನ್.ಮಾಣಿಕ್ಯ(ಪ್ರಭಾರ), ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲೇಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಯಣ್ಣ, ಖಾಸಗಿ ಶಾಲಾ ಅಸೋಷಿಯೇಶನ್ನ ಮುಖ್ಯಸ್ಥರು, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಇತರ ಇಲಾಖಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Schools to reopen in Mangalore Dakshina Kannada from September 20th orders Dc Dr Rajendra Kumar. Class 6th from Sep 20, Class 8, 9 and 10th from 17th to be reopened.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm