ಬ್ರೇಕಿಂಗ್ ನ್ಯೂಸ್
14-09-21 03:46 pm Mangaluru Correspondent ಕರಾವಳಿ
ಬಂಟ್ವಾಳ, ಸೆ.14: ಕುಡಿದು ತೂರಾಡುತ್ತಾ ಬಂದು ರಸ್ತೆಯಲ್ಲೇ ಮಲಗಿದ್ದ ವ್ಯಕ್ತಿಯೊಬ್ಬನಿಗೆ ಬೈಕ್ ಡಿಕ್ಕಿಯಾಗಿದ್ದು, ಇದರಿಂದ ತೀವ್ರ ಗಾಯಗೊಂಡಿದ್ದ ವ್ಯಕ್ತಿ ಆನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣಮೂರ್ತಿ ಎಂದು ಗುರುತಿಸಲಾಗಿದೆ. ಘಟನೆ ನಡೆದಿರುವುದು ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಕುಡಿದು ತೂರಾಡುತ್ತಾ ಬಂದು ರಸ್ತೆಯಲ್ಲೇ ಮಲಗಿದ್ದ ವ್ಯಕ್ತಿಯ ಮೇಲೆ ಬೈಕ್ ಹರಿದಿದ್ದ ವಿಡಿಯೋ ವೈರಲ್ ಆಗಿದೆ. ಇದಕ್ಕೂ ಮುನ್ನವೇ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಕ್ ಸವಾರನ ಅತಿವೇಗದ ಚಾಲನೆಯಿಂದಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ವ್ಯಕ್ತಿಗೆ ಡಿಕ್ಕಿಯಾಗಿದ್ದಾಗಿ ಕೇಸು ದಾಖಲಾಗಿತ್ತು.



ಈ ಬಗ್ಗೆ ಚೇತನ್ ಎಂಬವರು ಪೊಲೀಸ್ ದೂರು ನೀಡಿದ್ದರು. ತಾನು ಮೋಟರ್ ಸೈಕಲಿನಲ್ಲಿ ಸಾಗುತ್ತಿದ್ದಾಗ ಮುಂದಿನಿಂದ ತೆರಳುತ್ತಿದ್ದ ಕೆಎ 70 ಇ- 9186 ಸಂಖ್ಯೆಯ ಬೈಕ್ ವ್ಯಕ್ತಿಗೆ ಡಿಕ್ಕಿಯಾಗಿತ್ತು. ಅತಿ ವೇಗ ಮತ್ತು ನಿರ್ಲಕ್ಷ್ಯ ಚಾಲನೆಯಿಂದಾಗಿ ಘಟನೆ ನಡೆದಿತ್ತು ಎಂದು ದೂರು ನೀಡಿದ್ದರಿಂದ ಪೊಲೀಸರು ಅದೇ ರೀತಿ ಸದ್ರಿ ಬೈಕ್ ಸವಾರನ ವಿರುದ್ಧ ಕೇಸು ದಾಖಲಿಸಿದ್ದರು. ಆದರೆ, ಇಂದು ಘಟನಾ ಸ್ಥಳದ ವಿಡಿಯೋ ಹೊರಬಂದಿದ್ದು, ಕುಡಿದು ತೂರಾಡುತ್ತಾ ಬಂದು ರಸ್ತೆಯಲ್ಲೇ ಮಲಗಿದ ವ್ಯಕ್ತಿಯ ಚಿತ್ರಣವನನು ತೆರೆದಿಟ್ಟಿದೆ. ಒಬ್ಬಾತ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ನೋಡಿ, ಸರಿದು ವಾಹನ ಚಲಾಯಿಸಿದ್ದರೆ ಹಿಂಬದಿಯಿಂದ ಬಂದಿದ್ದ ಮತ್ತೊಂದು ಬೈಕ್ ಆತನ ಮೇಲಿನಿಂದಲೇ ಹರಿದು ಹೋಗಿತ್ತು.
ಇದರಿಂದ ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಪ್ರಕರಣ ಅತಿ ವೇಗದ ಚಾಲನೆಯೆಂದು ದಾಖಲಾಗಿದ್ದರೂ, ರಸ್ತೆಯಲ್ಲಿ ರಾತ್ರಿ ವೇಳೆ ಮಲಗಿದ್ದು ಒಂದು ಹಂತಕ್ಕೆ ಬೈಕ್ ಸವಾರನನ್ನು ರಕ್ಷಣೆ ಮಾಡಿದೆ.
Video: Click
Mangalore Drunk man dies after bike goes on him after falling asleep on road in Bantwal. The deceased has been identified as Krishnamurthy. Police have booked a case against the Two wheeler rider for over speed.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm