ಬ್ರೇಕಿಂಗ್ ನ್ಯೂಸ್
14-09-21 03:46 pm Mangaluru Correspondent ಕರಾವಳಿ
ಬಂಟ್ವಾಳ, ಸೆ.14: ಕುಡಿದು ತೂರಾಡುತ್ತಾ ಬಂದು ರಸ್ತೆಯಲ್ಲೇ ಮಲಗಿದ್ದ ವ್ಯಕ್ತಿಯೊಬ್ಬನಿಗೆ ಬೈಕ್ ಡಿಕ್ಕಿಯಾಗಿದ್ದು, ಇದರಿಂದ ತೀವ್ರ ಗಾಯಗೊಂಡಿದ್ದ ವ್ಯಕ್ತಿ ಆನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕೃಷ್ಣಮೂರ್ತಿ ಎಂದು ಗುರುತಿಸಲಾಗಿದೆ. ಘಟನೆ ನಡೆದಿರುವುದು ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಕುಡಿದು ತೂರಾಡುತ್ತಾ ಬಂದು ರಸ್ತೆಯಲ್ಲೇ ಮಲಗಿದ್ದ ವ್ಯಕ್ತಿಯ ಮೇಲೆ ಬೈಕ್ ಹರಿದಿದ್ದ ವಿಡಿಯೋ ವೈರಲ್ ಆಗಿದೆ. ಇದಕ್ಕೂ ಮುನ್ನವೇ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೈಕ್ ಸವಾರನ ಅತಿವೇಗದ ಚಾಲನೆಯಿಂದಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ವ್ಯಕ್ತಿಗೆ ಡಿಕ್ಕಿಯಾಗಿದ್ದಾಗಿ ಕೇಸು ದಾಖಲಾಗಿತ್ತು.
ಈ ಬಗ್ಗೆ ಚೇತನ್ ಎಂಬವರು ಪೊಲೀಸ್ ದೂರು ನೀಡಿದ್ದರು. ತಾನು ಮೋಟರ್ ಸೈಕಲಿನಲ್ಲಿ ಸಾಗುತ್ತಿದ್ದಾಗ ಮುಂದಿನಿಂದ ತೆರಳುತ್ತಿದ್ದ ಕೆಎ 70 ಇ- 9186 ಸಂಖ್ಯೆಯ ಬೈಕ್ ವ್ಯಕ್ತಿಗೆ ಡಿಕ್ಕಿಯಾಗಿತ್ತು. ಅತಿ ವೇಗ ಮತ್ತು ನಿರ್ಲಕ್ಷ್ಯ ಚಾಲನೆಯಿಂದಾಗಿ ಘಟನೆ ನಡೆದಿತ್ತು ಎಂದು ದೂರು ನೀಡಿದ್ದರಿಂದ ಪೊಲೀಸರು ಅದೇ ರೀತಿ ಸದ್ರಿ ಬೈಕ್ ಸವಾರನ ವಿರುದ್ಧ ಕೇಸು ದಾಖಲಿಸಿದ್ದರು. ಆದರೆ, ಇಂದು ಘಟನಾ ಸ್ಥಳದ ವಿಡಿಯೋ ಹೊರಬಂದಿದ್ದು, ಕುಡಿದು ತೂರಾಡುತ್ತಾ ಬಂದು ರಸ್ತೆಯಲ್ಲೇ ಮಲಗಿದ ವ್ಯಕ್ತಿಯ ಚಿತ್ರಣವನನು ತೆರೆದಿಟ್ಟಿದೆ. ಒಬ್ಬಾತ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ನೋಡಿ, ಸರಿದು ವಾಹನ ಚಲಾಯಿಸಿದ್ದರೆ ಹಿಂಬದಿಯಿಂದ ಬಂದಿದ್ದ ಮತ್ತೊಂದು ಬೈಕ್ ಆತನ ಮೇಲಿನಿಂದಲೇ ಹರಿದು ಹೋಗಿತ್ತು.
ಇದರಿಂದ ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಪ್ರಕರಣ ಅತಿ ವೇಗದ ಚಾಲನೆಯೆಂದು ದಾಖಲಾಗಿದ್ದರೂ, ರಸ್ತೆಯಲ್ಲಿ ರಾತ್ರಿ ವೇಳೆ ಮಲಗಿದ್ದು ಒಂದು ಹಂತಕ್ಕೆ ಬೈಕ್ ಸವಾರನನ್ನು ರಕ್ಷಣೆ ಮಾಡಿದೆ.
Video: Click
Mangalore Drunk man dies after bike goes on him after falling asleep on road in Bantwal. The deceased has been identified as Krishnamurthy. Police have booked a case against the Two wheeler rider for over speed.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 07:25 pm
HK News Desk
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm