ಬ್ರೇಕಿಂಗ್ ನ್ಯೂಸ್
15-09-21 05:19 pm Mangaluru Correspondent ಕರಾವಳಿ
ಮಂಗಳೂರು, ಸೆ.15: ಮೈಸೂರಿನ ನಂಜನಗೂಡಿನಲ್ಲಿ ಬಿಜೆಪಿ ಸರಕಾರ ದೇವಸ್ಥಾನ ಕೆಡವಿ ಹಾಕಿದ್ದನ್ನು ವಿರೋಧಿಸಿ ಮಾಜಿ ಸಚಿವ ಯು.ಟಿ.ಖಾದರ್ ತೀವ್ರ ಹರಿಹಾಯ್ದಿದ್ದಾರೆ. ಬಿಜೆಪಿಯವರಿಗೆ ಕೆಡವಿ ಹಾಕುವುದೇ ಸಂಸ್ಕೃತಿಯಾಗಿದೆ, ಅದೀಗ ಸ್ಪಷ್ಟವಾಗಿದೆ. ಜನರ ಭಾವನೆಗಳನ್ನು ಕೆರಳಿಸಿ ಸಮಾಜದಲ್ಲಿ ಒಡಕು ಸೃಷ್ಟಿಸುವುದು ಅವರ ಸಂಸ್ಕೃತಿ. ಅದಕ್ಕೆ ತಕ್ಕಂತೆ ನಡೆದುಕೊಂಡಿದ್ದಾರೆ ಎಂದು ವ್ಯಂಗ್ಯ ಮಾತುಗಳಲ್ಲಿ ಚುಚ್ಚಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಖಾದರ್, ಸಮಾಜದಲ್ಲಿ ಒಡಕು ಸೃಷ್ಟಿಸುವುದರಲ್ಲಿ ಬಿಜೆಪಿಯವರ ಸಂಸ್ಕೃತಿಯೇ ಆಗಿತ್ತು. ಈಗ ಧಾರ್ಮಿಕ ಕೇಂದ್ರಗಳನ್ನು ಕೆಡಹುವುದರಲ್ಲಿಯೂ ಯಶಸ್ವಿಯಾಗಿದ್ದಾರೆ. ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನ ಕೆಡವಿದ್ದಾರೆ. ದೇವಸ್ಥಾನ ಒಡೆದು ಹಾಕಿರುವ ಘಟನೆಗೆ ಸರಕಾರ ಯಾರನ್ನು ಜವಾಬ್ದಾರಿ ಮಾಡುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.
ಇದು ಮೈಸೂರಿಗೆ ಮಾತ್ರ ಅಲ್ಲ, ಇಡೀ ದೇಶದ ಪಾಲಿಗೆ ದೊಡ್ಡ ಕಪ್ಪುಚುಕ್ಕೆ. ದೇವಸ್ಥಾನದ ಇತಿಹಾಸ, ಅಲ್ಲಿನ ಶಿಲ್ಪಕಲೆ ಒಂದೂ ಇವರಿಗೆ ಅರ್ಥ ಆಗಿಲ್ವಲ್ಲಾ.. ಇದರ ನೈತಿಕ ಹೊಣೆ ಹೊತ್ತು ಮೈಸೂರು ಉಸ್ತುವಾರಿ ಸಚಿವರು ರಾಜಿನಾಮೆ ನೀಡಬೇಕು ಎಂದು ಹೇಳಿದ ಖಾದರ್, ಸರಕಾರ ಯಾವುದೇ ಒಂದು ಆದೇಶ ಕೊಡುವಾಗ ಯಾಕೆ ಯೋಚನೆ ಮಾಡೋದಿಲ್ಲ. ಈ ವಿಚಾರದ ಬಗ್ಗೆ ಕುಳಿತು ಚರ್ಚೆ ಮಾಡುತ್ತಿದ್ದರೆ, ಬಗೆಹರಿಸಲು ಆಗುತ್ತಿರಲಿಲ್ಲವೇ.. ದೊಡ್ಡ ದೊಡ್ಡವರಿಗೆ ಬಿಜೆಪಿ ಸರಕಾರ ಅಕ್ರಮ ಜಾಗವನ್ನು ಸಕ್ರಮ ಮಾಡಿಕೊಟ್ಟಿಲ್ಲವೇ.. ಹೀಗಿರುವಾಗ ದೇವಸ್ಥಾನದ ಜಾಗವನ್ನು ಸಕ್ರಮ ಮಾಡಲು ಸರಕಾರಕ್ಕೆ ತೊಂದರೆ ಏನಿತ್ತು. ಈ ರೀತಿಯ ವರ್ತನೆ, ಬಿಜೆಪಿ ಸರಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ರು.
ಮೈಸೂರಿನ ನಂಜನಗೂಡಿನಲ್ಲಿ ರಸ್ತೆ ಅಗಲೀಕರಣ ನೆಪದಲ್ಲಿ ದೇವಸ್ಥಾನ ಒಡೆದು ಹಾಕಿರುವ ವಿಚಾರ ಬಿಜೆಪಿ ಸರಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ. ಇದೇ ವಿಚಾರದಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದರೆ, ಮೈಸೂರಿನ ಬಿಜೆಪಿ ಸಂಸದರು ಆಗಿರುವ ಪ್ರಮಾದವನ್ನು ಮುಚ್ಚಿ ಹಾಕಲು ಹರಸಾಹಸ ಪಡುತ್ತಿದ್ದಾರೆ.
“The BJP formed government with the votes of Hindus and have taken contract of Hindutva. Now they have shown their true colours with the demolition of temples. It is said that notice has been served to the Mysuru district administration over removal of unauthorized religious structure. Undoubtedly, there is government’s hand in this removal. No deputy commissioner and Tahsildar has courage to demolish religious temples without the hand of the government. This can be termed as politically sponsored move slammed U T Khader in Mangalore.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm