ಬ್ರೇಕಿಂಗ್ ನ್ಯೂಸ್
15-09-21 06:02 pm Mangaluru Correspondent ಕರಾವಳಿ
ಉಳ್ಳಾಲ, ಸೆ.15: ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಗುತ್ತಿಗೆ ಕಾರ್ಮಿಕನೊಬ್ಬ 33,000 ವೋಲ್ಟ್ ವಿದ್ಯುತ್ ಹರಿಯುವ ಕಂಬಕ್ಕೇರಿ ಭಾಗಶಃ ಸುಟ್ಟು ಹೋದ ಘಟನೆ ತೊಕ್ಕೊಟ್ಟಿನ ಚೆಂಬುಗುಡ್ಡೆ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆ, ಶಿಗ್ಗಾಂವಿ ತಾಲೂಕು ಮಣಿಕಟ್ಟೆ ನಿವಾಸಿ ಬೊಮ್ಮಪ್ಪ(26) ವಿದ್ಯುತ್ ಅವಘಡಕ್ಕೆ ಭಾಗಶಃ ಸುಟ್ಟು ಆಸ್ಪತ್ರೆ ಸೇರಿದ ದುರ್ದೈವಿ. ಬೊಮ್ಮಪ್ಪ ಅವರು ಪ್ರವೀಣ್ ಸುವರ್ಣ ಎಂಬ ಮೆಸ್ಕಾಂ ಗುತ್ತಿಗೆದಾರರ ಜೊತೆ ಕಳೆದ ಐದು ತಿಂಗಳುಗಳಿಂದ ಚೆಂಬುಗುಡ್ಡೆ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ಇತರ ಕಾರ್ಮಿಕರ ಜೊತೆ ಬೊಮ್ಮಪ್ಪ ಮೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ.







ಈ ವೇಳೆ ಕಚೇರಿಯ ಅಂಗಣದಲ್ಲಿರುವ 33,000 ವೋಲ್ಟ್ ಯಾರ್ಡ್ ನಲ್ಲಿರುವ ಕಂಬಕ್ಕೆ ಏರಿ ಜಂಪರ್ ಟೈಟ್ ಮಾಡುವಂತೆ ಮೆಸ್ಕಾಂ ನ ಎಇಇ ದಯಾನಂದ್ ಎಂಬವರು ಹೇಳಿದ್ದಾರೆ ಎನ್ನಲಾಗುತ್ತಿದೆ. ಹೈ ವೋಲ್ಟ್ ವಿದ್ಯುತ್ ಹರಿಯುತ್ತಿದ್ದರೂ ಲೈನ್ ಆಫ್ ಆಗಿದೆ ಎಂದು ಹೇಳಿ ಕಂಬಕ್ಕೇರಿದ್ದು ಕೆಲವೇ ಕ್ಷಣಗಳಲ್ಲಿ ಇತರ ಕಾರ್ಮಿಕರ ಎದುರೇ ಸುಟ್ಟು ಹೋಗಿದ್ದರು.
ಕೂಡಲೇ ಮೆಸ್ಕಾಂ ಸಿಬ್ಬಂದಿ ಬೊಮ್ಮಪ್ಪನನ್ನ ಕೆಳಗಿಳಿಸಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿದ್ಯುತ್ ಆಘಾತಕ್ಕೆ ಬೊಮ್ಮಪ್ಪ ಅವರ ಸೊಂಟಕ್ಕಿಂತ ಕೆಳಗಿನ ಭಾಗ ಸಂಪೂರ್ಣ ಸುಟ್ಟು ಹೋಗಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಿ ಮೈಸೂರ್ ಇಲೆಕ್ಟ್ರಿಕಲ್ಸ್ ಲಿ. ನ ಅಧ್ಯಕ್ಷರಾದ ಸಂತೋಷ್ ಬೋಳಿಯಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಸ್ಥಳೀಯ ಕೌನ್ಸಿಲರ್ ರಾಜೇಶ್ ಯು.ಬಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೆಸ್ಕಾಂ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
Mangalore Thokottu MESCOM Contractor staff Electrocuted after touching 33 thousand vats current illegally. The person is said to be critically and has been admitted to the local hospital.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm