ಬ್ರೇಕಿಂಗ್ ನ್ಯೂಸ್
16-09-21 10:53 am Mangaluru Correspondent ಕರಾವಳಿ
ಮಂಗಳೂರು, ಸೆ.15: ಅಪಘಾತದಲ್ಲಿ ತೀವ್ರ ಗಾಯಗೊಂಡು ನಗರದ ಎಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ 23 ವರ್ಷದ ಯುವತಿಯ ಅಂಗಾಂಗಗಳನ್ನು ಕುಂಟುಬಸ್ಥರು ಅಗತ್ಯ ಇದ್ದವರಿಗೆ ನೆರವಾಗಲೆಂದು ದಾನ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ನಡೆದ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಹಲ್ಲೂರು ನಿವಾಸಿ ಕವನಾ ಮರಳಸಿದ್ದಯ್ಯ ಹಿರೇಮಠ್ (23) ಎಂಬ ಯುವತಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಸೆ.12ರಂದು ಎಜೆ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯ ಬ್ರೈನ್ ಡೆಡ್ ಆಗಿತ್ತು. ದೇಹಕ್ಕೆ ಆಗಿರುವ ಗಾಯಗಳು ಗುಣಮುಖ ಆಗದೇ ಇರುವುದು ಮತ್ತು ಬ್ರೇನ್ ಡೆಡ್ ಆಗಿದ್ದರಿಂದ ಕೋಮಾ ಸ್ಥಿತಿಗೆ ಹೋಗಿದ್ದರು. ಬದುಕುವುದು ಸಾಧ್ಯವಿಲ್ಲ ಎಂಬುದನ್ನು ವೈದ್ಯರು ತಿಳಿಸಿದಾಗ, ಕವನಾ ಸೋದರಿಯರು ಆಕೆಯ ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.

ಕರ್ನಾಟಕ ಸರಕಾರ ಜಾರಿಗೆ ತಂದಿರುವ ಜೀವನ ಸಾರ್ಥಕತೆ ಎನ್ನುವ ಯೋಜನೆಯ ಬಗ್ಗೆ ತಿಳಿದು ತಮ್ಮ ಅಂಗಾಂಗ ಯಾರಿಗಾದರೂ ಅಗತ್ಯ ಇದ್ದವರಿಗೆ ನೆರವಾಗಲೆಂದು ಸೋದರಿಯರು ಅಂಗಾಂಗ ದಾನಕ್ಕೆ ಮುಂದಾಗಿದ್ದರು. ಕವನಾ ಕುಟುಂಬಸ್ಥರ ಕೋರಿಕೆಯಂತೆ, ಜೀವನ ಸಾರ್ಥಕತೆ ಯೋಜನೆಯಡಿ ಅಮೂಲ್ಯ ಅಂಗಗಳನ್ನು ಎಜೆ ಆಸ್ಪತ್ರೆಯವರು ಸಂಗ್ರಹಿಸಿದ್ದು, ಅವನ್ನು ಅವಶ್ಯವುಳ್ಳ ವಿವಿಧ ಆಸ್ಪತ್ರೆಗಳಿಗೆ ತಲುಪಿಸಿದ್ದಾರೆ.
ಇದರಂತೆ, ಒಂದು ಕಿಡ್ನಿಯನ್ನು ಎಜೆ ಆಸ್ಪತ್ರೆಯಲ್ಲೇ ಅಗತ್ಯ ಇದ್ದವರಿಗೆ ಟ್ರಾನ್ಸ್ ಪ್ಲಾಂಟ್ ಮಾಡಲಾಗಿದೆ. ಲಿವರ್ ಅನ್ನು ಸಿಎಂಐ ಬೆಂಗಳೂರು ಆಸ್ಪತ್ರೆಗೆ, ಹೃದಯವನ್ನು ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್, ಇನ್ನೊಂದು ಕಿಡ್ನಿ, ಕಾರ್ನಿಯಾ ಮತ್ತು ಚರ್ಮವನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಎಜೆ ಆಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರೆಗಳಿಗೆ ಮಂಗಳೂರು ಏರ್ಪೋರ್ಟ್ ಮೂಲಕ ಮತ್ತು ಮಣಿಪಾಲ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಅಂಗಗಳನ್ನು ತಲುಪಿಸಲಾಗಿದೆ.
Kavana Maralsiddaya Hiremath from Hallur of Haveri district met with accident at Soratur village of Honnali taluk, Shivamogga was shifted to Mangaluru for treatment and was further referred to A J Hospital & Research Centre on September 12.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm