ಬ್ರೇಕಿಂಗ್ ನ್ಯೂಸ್
16-09-21 09:45 pm Mangaluru Correspondent ಕರಾವಳಿ
ಮಂಗಳೂರು, ಸೆ.16 : ನಗರದ ಮರೋಳಿಯ ಶೆಡ್ ಒಂದರಲ್ಲಿ ಟ್ಯಾಂಕರ್ ನಲ್ಲಿ ಅಕ್ರಮವಾಗಿ ಶೇಖರಿಸಲಾಗಿದ್ದ 15 ಸಾವಿರ ಲೀಟರ್ ಡೀಸೆಲನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸದ್ರಿ ಶೆಡ್ ಮರೋಳಿಯ ಯಮುನಾ ಅರ್ಥ್ ಮೂವರ್ಸ್ ಮತ್ತು ಬೋರ್ ವೆಲ್ಸ್ ಸಂಸ್ಥೆಗೆ ಸೇರಿದ್ದು ಅಕ್ರಮವಾಗಿ ದಾಸ್ತಾನು ಮಾಡಿದ್ದ ಡೀಸೆಲ್ ಕೂಡ ಅದೇ ಕಂಪನಿಗೆ ಸೇರಿದ್ದಾಗಿತ್ತು. ಆದರೆ, ಡೀಸೆಲನ್ನು ದಾಸ್ತಾನು ಮಾಡಿರುವ ಬಗ್ಗೆ ಯಾವುದೇ ದಾಖಲೆ ಹೊಂದಿರಲಿಲ್ಲ. ಕಂಪನಿಯ ಬೋರ್ ವೆಲ್ ಉದ್ದೇಶಕ್ಕೆ ಬಳಸಲು ಡೀಸೆಲ್ ಶೇಖರಣೆ ಮಾಡಿದ್ದರೂ ಅದನ್ನು ಅಕ್ರಮವಾಗಿ ಹೀಗೆ ದಾಸ್ತಾನು ಮಾಡಲು ಅವಕಾಶ ಇಲ್ಲ. ಹೀಗಾಗಿ ಕಂಕನಾಡಿ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

ಯಮುನಾ ಅರ್ಥ್ ಮೂವರ್ಸ್ ಸಂಸ್ಥೆಯ ಮಾಲಕ ಪುರುಷೋತ್ತಮ್ ಶೆಟ್ಟಿ ಅವರನ್ನು ಈ ಬಗ್ಗೆ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಆದರೆ, ಯಾವುದೇ ದಾಖಲೆ ಒದಗಿಸಲು ಶೆಟ್ಟಿ ವಿಫಲವಾಗಿದ್ದಾರೆ. ಹೀಗಾಗಿ ಪೆಟ್ರೋಲಿಯಂ ಏಕ್ಟ್ ಪ್ರಕಾರ ಕೇಸು ದಾಖಲಿಸಲಾಗಿದೆ. 15 ಸಾವಿರ ಲೀಟರ್ ಡೀಸೆಲ್ ಮೌಲ್ಯ 12.5 ಲಕ್ಷ ಆಗಿದ್ದು ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಹಿತಿ ಪ್ರಕಾರ, ಮುಂಬೈನಿಂದ ನೇರವಾಗಿ ರಿಫೈನರಿ ಕಂಪನಿಗಳಿಂದ ಅಥವಾ ಬೇನಾಮಿಯಾಗಿ ಇನ್ನಿತರ ಮೂಲಗಳಿಂದ ಡೀಸೆಲನ್ನು ಕಡಿಮೆ ದರಕ್ಕೆ ಪಡೆದು ದಾಸ್ತಾನು ಮಾಡಲಾಗುತ್ತದೆ. ಅದೇ ರೀತಿ ಯಮುನಾ ಅರ್ಥ್ ಮೂವರ್ಸ್ ಕಂಪನಿಯವರು ಮಾಡಿದ್ದಾರೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ. ಇತ್ತೀಚೆಗೆ ಬಂಟ್ವಾಳದಲ್ಲಿ ಡೀಸೆಲ್ ಪೈಪ್ ಲೈನಿಗೆ ಕನ್ನ ಹಾಕಿದ್ದಲ್ಲದೆ, 50 ಸಾವಿರ ಲೀಟರಿಗೂ ಹೆಚ್ಚು ಡೀಸೆಲ್ ಕಳವಾಗಿದ್ದು ಕಂಡುಬಂದಿತ್ತು. ಈ ರೀತಿ ಕಳವು ಮಾಡುವ ಡೀಸೆಲನ್ನು ಬೇನಾಮಿ ರೂಪದಲ್ಲಿ ಮಾರಾಟ ಮಾಡಲಾಗುತ್ತದೆ. ಬೋರ್ ವೆಲ್ ಕಂಪನಿಯವರು ಯಾವ ಮೂಲದಿಂದ ಡೀಸೆಲ್ ಪಡೆದಿದ್ದಾರೆ ಅನ್ನೋದು ಪೊಲೀಸರಿಗೆ ಪತ್ತೆಯಾಗಿಲ್ಲ. ಪೆಟ್ರೋಲ್ ಪಂಪ್ ಹೊರತುಪಡಿಸಿ ಇತರ ಕಡೆ ಡೀಸೆಲ್ ಅಥವಾ ಪೆಟ್ರೋಲ್ ಖರೀದಿಸುವುದು ಕಾನೂನು ಪ್ರಕಾರ ಅಪರಾಧವಾಗುತ್ತದೆ.
Mangalore Police seize illegally stored 15,000 litres of Diesel stored in a tank of tanker lorry from Yamuna Earth Movers and Buildts shed at Maroli. Police sources informed that it was stored without any permit. In this regard, police have taken one person for inquiry.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm