ಬ್ರೇಕಿಂಗ್ ನ್ಯೂಸ್
16-09-21 09:45 pm Mangaluru Correspondent ಕರಾವಳಿ
ಮಂಗಳೂರು, ಸೆ.16 : ನಗರದ ಮರೋಳಿಯ ಶೆಡ್ ಒಂದರಲ್ಲಿ ಟ್ಯಾಂಕರ್ ನಲ್ಲಿ ಅಕ್ರಮವಾಗಿ ಶೇಖರಿಸಲಾಗಿದ್ದ 15 ಸಾವಿರ ಲೀಟರ್ ಡೀಸೆಲನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸದ್ರಿ ಶೆಡ್ ಮರೋಳಿಯ ಯಮುನಾ ಅರ್ಥ್ ಮೂವರ್ಸ್ ಮತ್ತು ಬೋರ್ ವೆಲ್ಸ್ ಸಂಸ್ಥೆಗೆ ಸೇರಿದ್ದು ಅಕ್ರಮವಾಗಿ ದಾಸ್ತಾನು ಮಾಡಿದ್ದ ಡೀಸೆಲ್ ಕೂಡ ಅದೇ ಕಂಪನಿಗೆ ಸೇರಿದ್ದಾಗಿತ್ತು. ಆದರೆ, ಡೀಸೆಲನ್ನು ದಾಸ್ತಾನು ಮಾಡಿರುವ ಬಗ್ಗೆ ಯಾವುದೇ ದಾಖಲೆ ಹೊಂದಿರಲಿಲ್ಲ. ಕಂಪನಿಯ ಬೋರ್ ವೆಲ್ ಉದ್ದೇಶಕ್ಕೆ ಬಳಸಲು ಡೀಸೆಲ್ ಶೇಖರಣೆ ಮಾಡಿದ್ದರೂ ಅದನ್ನು ಅಕ್ರಮವಾಗಿ ಹೀಗೆ ದಾಸ್ತಾನು ಮಾಡಲು ಅವಕಾಶ ಇಲ್ಲ. ಹೀಗಾಗಿ ಕಂಕನಾಡಿ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

ಯಮುನಾ ಅರ್ಥ್ ಮೂವರ್ಸ್ ಸಂಸ್ಥೆಯ ಮಾಲಕ ಪುರುಷೋತ್ತಮ್ ಶೆಟ್ಟಿ ಅವರನ್ನು ಈ ಬಗ್ಗೆ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಆದರೆ, ಯಾವುದೇ ದಾಖಲೆ ಒದಗಿಸಲು ಶೆಟ್ಟಿ ವಿಫಲವಾಗಿದ್ದಾರೆ. ಹೀಗಾಗಿ ಪೆಟ್ರೋಲಿಯಂ ಏಕ್ಟ್ ಪ್ರಕಾರ ಕೇಸು ದಾಖಲಿಸಲಾಗಿದೆ. 15 ಸಾವಿರ ಲೀಟರ್ ಡೀಸೆಲ್ ಮೌಲ್ಯ 12.5 ಲಕ್ಷ ಆಗಿದ್ದು ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಹಿತಿ ಪ್ರಕಾರ, ಮುಂಬೈನಿಂದ ನೇರವಾಗಿ ರಿಫೈನರಿ ಕಂಪನಿಗಳಿಂದ ಅಥವಾ ಬೇನಾಮಿಯಾಗಿ ಇನ್ನಿತರ ಮೂಲಗಳಿಂದ ಡೀಸೆಲನ್ನು ಕಡಿಮೆ ದರಕ್ಕೆ ಪಡೆದು ದಾಸ್ತಾನು ಮಾಡಲಾಗುತ್ತದೆ. ಅದೇ ರೀತಿ ಯಮುನಾ ಅರ್ಥ್ ಮೂವರ್ಸ್ ಕಂಪನಿಯವರು ಮಾಡಿದ್ದಾರೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ. ಇತ್ತೀಚೆಗೆ ಬಂಟ್ವಾಳದಲ್ಲಿ ಡೀಸೆಲ್ ಪೈಪ್ ಲೈನಿಗೆ ಕನ್ನ ಹಾಕಿದ್ದಲ್ಲದೆ, 50 ಸಾವಿರ ಲೀಟರಿಗೂ ಹೆಚ್ಚು ಡೀಸೆಲ್ ಕಳವಾಗಿದ್ದು ಕಂಡುಬಂದಿತ್ತು. ಈ ರೀತಿ ಕಳವು ಮಾಡುವ ಡೀಸೆಲನ್ನು ಬೇನಾಮಿ ರೂಪದಲ್ಲಿ ಮಾರಾಟ ಮಾಡಲಾಗುತ್ತದೆ. ಬೋರ್ ವೆಲ್ ಕಂಪನಿಯವರು ಯಾವ ಮೂಲದಿಂದ ಡೀಸೆಲ್ ಪಡೆದಿದ್ದಾರೆ ಅನ್ನೋದು ಪೊಲೀಸರಿಗೆ ಪತ್ತೆಯಾಗಿಲ್ಲ. ಪೆಟ್ರೋಲ್ ಪಂಪ್ ಹೊರತುಪಡಿಸಿ ಇತರ ಕಡೆ ಡೀಸೆಲ್ ಅಥವಾ ಪೆಟ್ರೋಲ್ ಖರೀದಿಸುವುದು ಕಾನೂನು ಪ್ರಕಾರ ಅಪರಾಧವಾಗುತ್ತದೆ.
Mangalore Police seize illegally stored 15,000 litres of Diesel stored in a tank of tanker lorry from Yamuna Earth Movers and Buildts shed at Maroli. Police sources informed that it was stored without any permit. In this regard, police have taken one person for inquiry.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm