ಶ್ರದ್ಧಾಕೇಂದ್ರಗಳಿಗೆ ಹಾನಿ ಮಾಡಿದರೆ ಯಾರಿಗೂ ಒಳ್ಳೆಯದಾಗಲ್ಲ ; ಸಚಿವೆ ಶೋಭಾ

17-09-21 05:36 pm       Udupi Correspondent   ಕರಾವಳಿ

ದೇವಸ್ಥಾನ, ಮಸೀದಿ, ಚರ್ಚುಗಳು ನಮ್ಮ ಶ್ರದ್ಧಾಕೇಂದ್ರಗಳು. ಅವುಗಳ ರಕ್ಷಣೆ ನಮ್ಮ ಜವಾಬ್ದಾರಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಉಡುಪಿ, ಸೆ.17 : ದೇವಸ್ಥಾನ, ಮಸೀದಿ, ಚರ್ಚುಗಳು ನಮ್ಮ ಶ್ರದ್ಧಾಕೇಂದ್ರಗಳು. ಅವುಗಳ ರಕ್ಷಣೆ ನಮ್ಮ ಜವಾಬ್ದಾರಿ. ಯಾವುದೇ ಸಮುದಾಯ, ಧರ್ಮಕ್ಕೆ ನೋವುಂಟು ಮಾಡಿದರೆ ಯಾರಿಗೂ ಒಳ್ಳೆಯದಾಗಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ರಾಜ್ಯದಲ್ಲಿ ದೇಗುಲ ಧ್ವಂಸ ವಿಚಾರದ ಕುರಿತು ಅವರು ಉಡುಪಿಯಲ್ಲಿ ಪ್ರತಿಕ್ರಿಯಿಸಿದ ಶೋಭಾ, ಅಕ್ರಮ ಸ್ಥಳದಲ್ಲಿ ಶ್ರದ್ಧಾಕೇಂದ್ರಗಳಿದ್ದರೆ ಪೂರ್ವ ಸೂಚನೆ ನೀಡಿ, ಸ್ಥಳೀಯ ಜನರ ಮನವೊಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬಹುದು. ಆನಂತರ ತೆರವು ಮಾಡುವ ಬಗ್ಗೆ ಸರಕಾರ ಯೋಚಿಸಬೇಕು ಎಂದು ಅವರು ಮನವಿ ಮಾಡಿದರು.

ಶ್ರದ್ಧಾಕೇಂದ್ರಗಳ ಬಗ್ಗೆ ಜನರ ನಂಬಿಕೆ, ಭಕ್ತಿ ಜಾಸ್ತಿ ಇರುತ್ತದೆ. ಭಾವನೆಗೆ ನೋವಾದಾಗ ಪ್ರತಿಭಟನೆ ನಡೆಸುತ್ತಾರೆ. ಅಕ್ರಮ ದೇವಾಲಯಗಳು ಕಂಡು ಬಂದರೆ ಊರಿನ ಜನರ ಮನವೊಲಿಸಿ ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯ ಸರಕಾರಕ್ಕೆ ನನ್ನ ಪ್ರಾರ್ಥನೆಯಾಗಿದೆ ಎಂದರು.

ದೇಶದ ಬೇರೆ ಬೇರೆ ಭಾಗದಲ್ಲಿ ಹಿಂದೂ ಧರ್ಮೀಯರ ದೌರ್ಬಲ್ಯವನ್ನು ದುರುಪಯೋಗಪಡಿಸಿ ಮತಾಂತರ ಮಾಡುವ ಕಾರ್ಯಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಕಠಿಣ ಕಾನೂನು ತರಬೇಕಾಗಿದೆ. ಬಲವಂತದ ಮತಾಂತರ ತಡೆಯಲು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳ ಬೇಕು ಎಂದು ಅವರು ಒತ್ತಾಯಿಸಿದರು. 

ಜಿಎಸ್‌ಟಿಗೆ ಪೆಟ್ರೋಲ್ ಉತ್ಪನ್ನ ತಂದರೆ ಪೆಟ್ರೋಲ್ ದರ ಇಳಿಕೆಯಾಗಬಹುದು ಎಂಬ ನಿರೀಕ್ಷೆ ಇದೆ. ಆ ನಿಟ್ಟಿನಲ್ಲಿ ಪ್ರಧಾನಿ ಮೋದಿ ಪ್ರಯತ್ನ ಮಾಡುತ್ತಿದ್ದಾರೆ ಎಂದವರು ತಿಳಿಸಿದರು.

On the occasion of Prime Minister Narendra Modi's 71st birthday, Lok Sabha member from here and union minister, Shobha Karandlaje, distributed food kits to the Koraga families. "Serving the nation and the poor people are very close to Modi's heart. Service activities make him happy. BJP is involved with service activities in various ways. My best wishes and greetings to the Prime Minister on his birthday. I pray to Lord Krishna and Goddess Chamundeshwari to grant him the strength to protect the country and to lead it to further eminence," she said on the occasion.