ಬ್ರೇಕಿಂಗ್ ನ್ಯೂಸ್
18-09-21 09:25 pm Mangaluru Correspondent ಕರಾವಳಿ
ಮಂಗಳೂರು, ಸೆ.18 : ಕೋವಿಡ್ ಸೋಂಕು ಇಳಿಕೆಯಾದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವಿಧಿಸಿದ್ದ ವಾರಾಂತ್ಯ ನಿರ್ಬಂಧಗಳನ್ನು ತೆರವುಗೊಳಿಸಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಕೆಲವು ಷರತ್ತುಗಳನ್ನು ವಿಧಿಸಿ ಸೇವೆ ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ.
ದೇವಾಲಯಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಆಡಳಿತ ವರ್ಗವು ಜವಾಬ್ದಾರಿ ಹೊಂದಿರತಕ್ಕದ್ದು. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್ಟಿ-ಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿಯನ್ನು ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

ದೇವಾಲಯಗಳಿಗೆ ಬರುವ ಭಕ್ತರು ಎರಡು ಡೋಸ್ ಲಸಿಕೆ ಪಡೆದಿದ್ದರೂ 72 ಗಂಟೆಗಳಿಗಿಂತ ಮುಂಚಿತ ಆರ್ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಬೇಕು. ಭಕ್ತರಿಗೆ ಲಸಿಕೆ ಪಡೆಯುವ ಬಗ್ಗೆ ಸಲಹೆಗಳನ್ನು ನೀಡುವ ಕುರಿತು ಹಾಗೂ ಜಾಗೃತಿ ಮೂಡಿಸಲು ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ದೇವಾಲಯಕ್ಕೆ ಬರುವ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆಯದಿದ್ದಲ್ಲಿ ಅಂತಹವರಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ದೇವಸ್ಥಾನಗಳಲ್ಲಿ ಕೋವಿಡ್ ಲಸಿಕೆ ಕೇಂದ್ರ ತೆರೆಯಲು ಕ್ರಮ ವಹಿಸಬೇಕು.
ದೇವಾಲಯಗಳಲ್ಲಿ ನಡೆಯುವ ಸರ್ಪಸಂಸ್ಕಾರ, ಆಶ್ಲೇಷ ಬಲಿ, ಪಂಚಾಮೃತ ಮಹಾಭಿಷೇಕ, ನಾಗಪ್ರತಿಷ್ಠೆ ಸಹಿತ ವಿವಿಧ ಸೇವೆಗಳನ್ನು ಆದಷ್ಟು ಮಿತಿಗೊಳಿಸಿ, ಜನಸಂದಣಿಯಾಗದಂತೆ ಕನಿಷ್ಠ ಸಂಖ್ಯೆಯಲ್ಲಿ ಸೇವೆಗಳನ್ನು ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
Devotees permitted to enter Kukke Shri Subrahmanya Temple and Dharmasthala with covid 19 report orders Mangalore Dc Dr Rajendra.
06-03-26 10:21 am
HK News Staffer
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
06-03-26 09:50 am
Giridhar Shetty, Headline Karnataka
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm