ಬ್ರೇಕಿಂಗ್ ನ್ಯೂಸ್
18-09-21 09:25 pm Mangaluru Correspondent ಕರಾವಳಿ
ಮಂಗಳೂರು, ಸೆ.18 : ಕೋವಿಡ್ ಸೋಂಕು ಇಳಿಕೆಯಾದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವಿಧಿಸಿದ್ದ ವಾರಾಂತ್ಯ ನಿರ್ಬಂಧಗಳನ್ನು ತೆರವುಗೊಳಿಸಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಕೆಲವು ಷರತ್ತುಗಳನ್ನು ವಿಧಿಸಿ ಸೇವೆ ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ.
ದೇವಾಲಯಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಆಡಳಿತ ವರ್ಗವು ಜವಾಬ್ದಾರಿ ಹೊಂದಿರತಕ್ಕದ್ದು. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್ಟಿ-ಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿಯನ್ನು ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

ದೇವಾಲಯಗಳಿಗೆ ಬರುವ ಭಕ್ತರು ಎರಡು ಡೋಸ್ ಲಸಿಕೆ ಪಡೆದಿದ್ದರೂ 72 ಗಂಟೆಗಳಿಗಿಂತ ಮುಂಚಿತ ಆರ್ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಬೇಕು. ಭಕ್ತರಿಗೆ ಲಸಿಕೆ ಪಡೆಯುವ ಬಗ್ಗೆ ಸಲಹೆಗಳನ್ನು ನೀಡುವ ಕುರಿತು ಹಾಗೂ ಜಾಗೃತಿ ಮೂಡಿಸಲು ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ದೇವಾಲಯಕ್ಕೆ ಬರುವ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆಯದಿದ್ದಲ್ಲಿ ಅಂತಹವರಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ದೇವಸ್ಥಾನಗಳಲ್ಲಿ ಕೋವಿಡ್ ಲಸಿಕೆ ಕೇಂದ್ರ ತೆರೆಯಲು ಕ್ರಮ ವಹಿಸಬೇಕು.
ದೇವಾಲಯಗಳಲ್ಲಿ ನಡೆಯುವ ಸರ್ಪಸಂಸ್ಕಾರ, ಆಶ್ಲೇಷ ಬಲಿ, ಪಂಚಾಮೃತ ಮಹಾಭಿಷೇಕ, ನಾಗಪ್ರತಿಷ್ಠೆ ಸಹಿತ ವಿವಿಧ ಸೇವೆಗಳನ್ನು ಆದಷ್ಟು ಮಿತಿಗೊಳಿಸಿ, ಜನಸಂದಣಿಯಾಗದಂತೆ ಕನಿಷ್ಠ ಸಂಖ್ಯೆಯಲ್ಲಿ ಸೇವೆಗಳನ್ನು ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
Devotees permitted to enter Kukke Shri Subrahmanya Temple and Dharmasthala with covid 19 report orders Mangalore Dc Dr Rajendra.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm