ಬ್ರೇಕಿಂಗ್ ನ್ಯೂಸ್
18-09-21 09:25 pm Mangaluru Correspondent ಕರಾವಳಿ
ಮಂಗಳೂರು, ಸೆ.18 : ಕೋವಿಡ್ ಸೋಂಕು ಇಳಿಕೆಯಾದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವಿಧಿಸಿದ್ದ ವಾರಾಂತ್ಯ ನಿರ್ಬಂಧಗಳನ್ನು ತೆರವುಗೊಳಿಸಿ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಕೆಲವು ಷರತ್ತುಗಳನ್ನು ವಿಧಿಸಿ ಸೇವೆ ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ.
ದೇವಾಲಯಗಳಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಆಡಳಿತ ವರ್ಗವು ಜವಾಬ್ದಾರಿ ಹೊಂದಿರತಕ್ಕದ್ದು. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್ಟಿ-ಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿಯನ್ನು ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ.

ದೇವಾಲಯಗಳಿಗೆ ಬರುವ ಭಕ್ತರು ಎರಡು ಡೋಸ್ ಲಸಿಕೆ ಪಡೆದಿದ್ದರೂ 72 ಗಂಟೆಗಳಿಗಿಂತ ಮುಂಚಿತ ಆರ್ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಬೇಕು. ಭಕ್ತರಿಗೆ ಲಸಿಕೆ ಪಡೆಯುವ ಬಗ್ಗೆ ಸಲಹೆಗಳನ್ನು ನೀಡುವ ಕುರಿತು ಹಾಗೂ ಜಾಗೃತಿ ಮೂಡಿಸಲು ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ದೇವಾಲಯಕ್ಕೆ ಬರುವ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆಯದಿದ್ದಲ್ಲಿ ಅಂತಹವರಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ದೇವಸ್ಥಾನಗಳಲ್ಲಿ ಕೋವಿಡ್ ಲಸಿಕೆ ಕೇಂದ್ರ ತೆರೆಯಲು ಕ್ರಮ ವಹಿಸಬೇಕು.
ದೇವಾಲಯಗಳಲ್ಲಿ ನಡೆಯುವ ಸರ್ಪಸಂಸ್ಕಾರ, ಆಶ್ಲೇಷ ಬಲಿ, ಪಂಚಾಮೃತ ಮಹಾಭಿಷೇಕ, ನಾಗಪ್ರತಿಷ್ಠೆ ಸಹಿತ ವಿವಿಧ ಸೇವೆಗಳನ್ನು ಆದಷ್ಟು ಮಿತಿಗೊಳಿಸಿ, ಜನಸಂದಣಿಯಾಗದಂತೆ ಕನಿಷ್ಠ ಸಂಖ್ಯೆಯಲ್ಲಿ ಸೇವೆಗಳನ್ನು ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
Devotees permitted to enter Kukke Shri Subrahmanya Temple and Dharmasthala with covid 19 report orders Mangalore Dc Dr Rajendra.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm