ಬ್ರೇಕಿಂಗ್ ನ್ಯೂಸ್
19-09-21 02:39 pm Udupi Correspondent ಕರಾವಳಿ
ಕುಂದಾಪುರ, ಸೆ.19: ನಶೆಯಲ್ಲಿದ್ದ ಕಂಟೇನರ್ ಚಾಲಕ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಅಡ್ಡಾದಿಡ್ಡಿ ಚಲಿಸಿ ಆತಂಕ ಸೃಷ್ಟಿಸಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಬಳಿ ನಡೆದಿದೆ.
ವೇಗ ತಡೆಗಾಗಿ ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಅದನ್ನು ಬರೋಬ್ಬರಿ ನಾಲ್ಕು ಕಿ.ಮೀ. ಉದ್ದಕ್ಕೂ ಎಳೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಸ್ಥಳೀಯರು, ಆಟೋ ಚಾಲಕರು ಕಂಟೇನರ್ ಚಾಲಕನ ಗಮನಕ್ಕೆ ತಂದರೂ ಆತನಿಗೆ ಗೊತ್ತಾಗಿರಲಿಲ್ಲ.







ಮುಳ್ಳಿಕಟ್ಟೆ ಎಂಬಲ್ಲಿ ಹೆದ್ದಾರಿಗೆ ಅಡ್ಡಲಾಗಿ ವೇಗ ತಡೆಗಾಗಿ ಬ್ಯಾರಿಕೇಡ್ ಹಾಕಿದ್ದು ಅದನ್ನು ಎಳಕೊಂಡೇ ಸಾಗಿದ್ದಾನೆ. ಆನಂತರ, ಅರಾಟೆ ಸೇತುವೆಯ ತಡೆಗೋಡೆಗೂ ಡಿಕ್ಕಿಯಾಗಿ ಮುಂದೆ ಸಾಗಿದ್ದಾನೆ. ಕಂಟೈನರ್ ಅನ್ನು ನಿಲ್ಲಿಸಲು ಮುಳ್ಳಿಕಟ್ಟೆಯ ರಿಕ್ಷಾ ಚಾಲಕರು ಹರ ಸಾಹಸ ಮಾಡಿದ್ದಾರೆ. ಕೊನೆಗೆ ಕಂಟೈನರ್ ಮುಂದಿನ ಗಾಜಿಗೆ ಕಲ್ಲೆಸೆದು ಸ್ಥಳೀಯರು ಚಾಲಕನಿಗೆ ಲಾರಿ ನಿಲ್ಲಿಸಲು ಆಗ್ರಹಿಸಿದ್ದಾರೆ. ನಂತರ ಹೆಮ್ಮಾಡಿಯ WFK ಬಳಿ ಕಂಟೈನರನ್ನು ತಡೆದು ಸಾರ್ವಜನಿಕರೇ ಸೇರಿ ಚಾಲಕನನ್ನು ಲಾರಿಯಿಂದ ಇಳಿಸಿದ್ದಾರೆ.
ಚಾಲಕನನ್ನು ಬಳಿಕ ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚಾಲಕ ಗಾಂಜಾ ಅಥವಾ ಮದ್ಯ ಸೇವಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಛತ್ತಿಸ್ ಗಢ ನೋಂದಣಿಯ ಕಂಟೈನರ್ ಆಗಿದ್ದು ಕುರುಚಲು ಹುಲ್ಲನ್ನು ಸಾಗಿಸುತ್ತಿದ್ದ. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರ ಭೇಟಿ ನೀಡಿ, ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Video:
Kundapura Truck Driver creates havoc consuming alcohol traffic police risk life to stop truck.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm