ಬ್ರೇಕಿಂಗ್ ನ್ಯೂಸ್
19-09-21 02:39 pm Udupi Correspondent ಕರಾವಳಿ
ಕುಂದಾಪುರ, ಸೆ.19: ನಶೆಯಲ್ಲಿದ್ದ ಕಂಟೇನರ್ ಚಾಲಕ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಅಡ್ಡಾದಿಡ್ಡಿ ಚಲಿಸಿ ಆತಂಕ ಸೃಷ್ಟಿಸಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಬಳಿ ನಡೆದಿದೆ.
ವೇಗ ತಡೆಗಾಗಿ ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಅದನ್ನು ಬರೋಬ್ಬರಿ ನಾಲ್ಕು ಕಿ.ಮೀ. ಉದ್ದಕ್ಕೂ ಎಳೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಸ್ಥಳೀಯರು, ಆಟೋ ಚಾಲಕರು ಕಂಟೇನರ್ ಚಾಲಕನ ಗಮನಕ್ಕೆ ತಂದರೂ ಆತನಿಗೆ ಗೊತ್ತಾಗಿರಲಿಲ್ಲ.







ಮುಳ್ಳಿಕಟ್ಟೆ ಎಂಬಲ್ಲಿ ಹೆದ್ದಾರಿಗೆ ಅಡ್ಡಲಾಗಿ ವೇಗ ತಡೆಗಾಗಿ ಬ್ಯಾರಿಕೇಡ್ ಹಾಕಿದ್ದು ಅದನ್ನು ಎಳಕೊಂಡೇ ಸಾಗಿದ್ದಾನೆ. ಆನಂತರ, ಅರಾಟೆ ಸೇತುವೆಯ ತಡೆಗೋಡೆಗೂ ಡಿಕ್ಕಿಯಾಗಿ ಮುಂದೆ ಸಾಗಿದ್ದಾನೆ. ಕಂಟೈನರ್ ಅನ್ನು ನಿಲ್ಲಿಸಲು ಮುಳ್ಳಿಕಟ್ಟೆಯ ರಿಕ್ಷಾ ಚಾಲಕರು ಹರ ಸಾಹಸ ಮಾಡಿದ್ದಾರೆ. ಕೊನೆಗೆ ಕಂಟೈನರ್ ಮುಂದಿನ ಗಾಜಿಗೆ ಕಲ್ಲೆಸೆದು ಸ್ಥಳೀಯರು ಚಾಲಕನಿಗೆ ಲಾರಿ ನಿಲ್ಲಿಸಲು ಆಗ್ರಹಿಸಿದ್ದಾರೆ. ನಂತರ ಹೆಮ್ಮಾಡಿಯ WFK ಬಳಿ ಕಂಟೈನರನ್ನು ತಡೆದು ಸಾರ್ವಜನಿಕರೇ ಸೇರಿ ಚಾಲಕನನ್ನು ಲಾರಿಯಿಂದ ಇಳಿಸಿದ್ದಾರೆ.
ಚಾಲಕನನ್ನು ಬಳಿಕ ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚಾಲಕ ಗಾಂಜಾ ಅಥವಾ ಮದ್ಯ ಸೇವಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಛತ್ತಿಸ್ ಗಢ ನೋಂದಣಿಯ ಕಂಟೈನರ್ ಆಗಿದ್ದು ಕುರುಚಲು ಹುಲ್ಲನ್ನು ಸಾಗಿಸುತ್ತಿದ್ದ. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರ ಭೇಟಿ ನೀಡಿ, ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Video:
Kundapura Truck Driver creates havoc consuming alcohol traffic police risk life to stop truck.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm