ಬ್ರೇಕಿಂಗ್ ನ್ಯೂಸ್
19-09-21 02:39 pm Udupi Correspondent ಕರಾವಳಿ
ಕುಂದಾಪುರ, ಸೆ.19: ನಶೆಯಲ್ಲಿದ್ದ ಕಂಟೇನರ್ ಚಾಲಕ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಅಡ್ಡಾದಿಡ್ಡಿ ಚಲಿಸಿ ಆತಂಕ ಸೃಷ್ಟಿಸಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಬಳಿ ನಡೆದಿದೆ.
ವೇಗ ತಡೆಗಾಗಿ ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಅದನ್ನು ಬರೋಬ್ಬರಿ ನಾಲ್ಕು ಕಿ.ಮೀ. ಉದ್ದಕ್ಕೂ ಎಳೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಸ್ಥಳೀಯರು, ಆಟೋ ಚಾಲಕರು ಕಂಟೇನರ್ ಚಾಲಕನ ಗಮನಕ್ಕೆ ತಂದರೂ ಆತನಿಗೆ ಗೊತ್ತಾಗಿರಲಿಲ್ಲ.







ಮುಳ್ಳಿಕಟ್ಟೆ ಎಂಬಲ್ಲಿ ಹೆದ್ದಾರಿಗೆ ಅಡ್ಡಲಾಗಿ ವೇಗ ತಡೆಗಾಗಿ ಬ್ಯಾರಿಕೇಡ್ ಹಾಕಿದ್ದು ಅದನ್ನು ಎಳಕೊಂಡೇ ಸಾಗಿದ್ದಾನೆ. ಆನಂತರ, ಅರಾಟೆ ಸೇತುವೆಯ ತಡೆಗೋಡೆಗೂ ಡಿಕ್ಕಿಯಾಗಿ ಮುಂದೆ ಸಾಗಿದ್ದಾನೆ. ಕಂಟೈನರ್ ಅನ್ನು ನಿಲ್ಲಿಸಲು ಮುಳ್ಳಿಕಟ್ಟೆಯ ರಿಕ್ಷಾ ಚಾಲಕರು ಹರ ಸಾಹಸ ಮಾಡಿದ್ದಾರೆ. ಕೊನೆಗೆ ಕಂಟೈನರ್ ಮುಂದಿನ ಗಾಜಿಗೆ ಕಲ್ಲೆಸೆದು ಸ್ಥಳೀಯರು ಚಾಲಕನಿಗೆ ಲಾರಿ ನಿಲ್ಲಿಸಲು ಆಗ್ರಹಿಸಿದ್ದಾರೆ. ನಂತರ ಹೆಮ್ಮಾಡಿಯ WFK ಬಳಿ ಕಂಟೈನರನ್ನು ತಡೆದು ಸಾರ್ವಜನಿಕರೇ ಸೇರಿ ಚಾಲಕನನ್ನು ಲಾರಿಯಿಂದ ಇಳಿಸಿದ್ದಾರೆ.
ಚಾಲಕನನ್ನು ಬಳಿಕ ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚಾಲಕ ಗಾಂಜಾ ಅಥವಾ ಮದ್ಯ ಸೇವಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಛತ್ತಿಸ್ ಗಢ ನೋಂದಣಿಯ ಕಂಟೈನರ್ ಆಗಿದ್ದು ಕುರುಚಲು ಹುಲ್ಲನ್ನು ಸಾಗಿಸುತ್ತಿದ್ದ. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರ ಭೇಟಿ ನೀಡಿ, ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Video:
Kundapura Truck Driver creates havoc consuming alcohol traffic police risk life to stop truck.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm