ಬ್ರೇಕಿಂಗ್ ನ್ಯೂಸ್
19-09-21 02:39 pm Udupi Correspondent ಕರಾವಳಿ
ಕುಂದಾಪುರ, ಸೆ.19: ನಶೆಯಲ್ಲಿದ್ದ ಕಂಟೇನರ್ ಚಾಲಕ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಅಡ್ಡಾದಿಡ್ಡಿ ಚಲಿಸಿ ಆತಂಕ ಸೃಷ್ಟಿಸಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಬಳಿ ನಡೆದಿದೆ.
ವೇಗ ತಡೆಗಾಗಿ ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಅದನ್ನು ಬರೋಬ್ಬರಿ ನಾಲ್ಕು ಕಿ.ಮೀ. ಉದ್ದಕ್ಕೂ ಎಳೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಸ್ಥಳೀಯರು, ಆಟೋ ಚಾಲಕರು ಕಂಟೇನರ್ ಚಾಲಕನ ಗಮನಕ್ಕೆ ತಂದರೂ ಆತನಿಗೆ ಗೊತ್ತಾಗಿರಲಿಲ್ಲ.







ಮುಳ್ಳಿಕಟ್ಟೆ ಎಂಬಲ್ಲಿ ಹೆದ್ದಾರಿಗೆ ಅಡ್ಡಲಾಗಿ ವೇಗ ತಡೆಗಾಗಿ ಬ್ಯಾರಿಕೇಡ್ ಹಾಕಿದ್ದು ಅದನ್ನು ಎಳಕೊಂಡೇ ಸಾಗಿದ್ದಾನೆ. ಆನಂತರ, ಅರಾಟೆ ಸೇತುವೆಯ ತಡೆಗೋಡೆಗೂ ಡಿಕ್ಕಿಯಾಗಿ ಮುಂದೆ ಸಾಗಿದ್ದಾನೆ. ಕಂಟೈನರ್ ಅನ್ನು ನಿಲ್ಲಿಸಲು ಮುಳ್ಳಿಕಟ್ಟೆಯ ರಿಕ್ಷಾ ಚಾಲಕರು ಹರ ಸಾಹಸ ಮಾಡಿದ್ದಾರೆ. ಕೊನೆಗೆ ಕಂಟೈನರ್ ಮುಂದಿನ ಗಾಜಿಗೆ ಕಲ್ಲೆಸೆದು ಸ್ಥಳೀಯರು ಚಾಲಕನಿಗೆ ಲಾರಿ ನಿಲ್ಲಿಸಲು ಆಗ್ರಹಿಸಿದ್ದಾರೆ. ನಂತರ ಹೆಮ್ಮಾಡಿಯ WFK ಬಳಿ ಕಂಟೈನರನ್ನು ತಡೆದು ಸಾರ್ವಜನಿಕರೇ ಸೇರಿ ಚಾಲಕನನ್ನು ಲಾರಿಯಿಂದ ಇಳಿಸಿದ್ದಾರೆ.
ಚಾಲಕನನ್ನು ಬಳಿಕ ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚಾಲಕ ಗಾಂಜಾ ಅಥವಾ ಮದ್ಯ ಸೇವಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಛತ್ತಿಸ್ ಗಢ ನೋಂದಣಿಯ ಕಂಟೈನರ್ ಆಗಿದ್ದು ಕುರುಚಲು ಹುಲ್ಲನ್ನು ಸಾಗಿಸುತ್ತಿದ್ದ. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರ ಭೇಟಿ ನೀಡಿ, ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Video:
Kundapura Truck Driver creates havoc consuming alcohol traffic police risk life to stop truck.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am