ಬ್ರೇಕಿಂಗ್ ನ್ಯೂಸ್
19-09-21 05:17 pm Mangaluru Correspondent ಕರಾವಳಿ
ಮಂಗಳೂರು, ಸೆ.19: ಹಿಂದುಗಳಿಗೆ ಅನ್ಯಾಯ ಮಾಡಿದ ಗಾಂಧೀಜಿಯನ್ನೇ ಬಿಟ್ಟಿಲ್ಲ. ನೀವು ಯಾವ ಲೆಕ್ಕ ಎಂದು ಸಿಎಂ ಬೊಮ್ಮಾಯಿ ಉದ್ದೇಶಿಸಿ ಬೆದರಿಕೆ ಒಡ್ಡುವ ರೀತಿ ಹೇಳಿಕೆ ನೀಡಿದ್ದ ಹಿಂದು ಮಹಾಸಭಾ ಮುಖಂಡ ಧರ್ಮೇಂದ್ರ ಅಮೀನ್ ಅವರನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.


ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಹಿಂದು ಮಹಾಸಭಾ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ, ದೇವಸ್ಥಾನ ಒಡೆದ ವಿಚಾರವನ್ನು ಖಂಡಿಸುತ್ತಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆನಂತರ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಕೇವಲ ನಾಟಕ ಮಾತ್ರ. ಇವರಿಗೆ ಅಷ್ಟು ಅಭಿಮಾನ ಇದ್ದರೆ ಬಿಜೆಪಿಗೆ ಬೆಂಬಲ ನೀಡಬಾರದು. ದೇವಸ್ಥಾನ ಒಡೆದಿರುವ ವಿಚಾರವನ್ನು ಸಣ್ಣ ತಪ್ಪು ಅನ್ನುತ್ತಿದ್ದಾರೆ. ಇವರಿಗೆ ದೇವಸ್ಥಾನ ಒಡೆದು ಹಾಕಿದ್ದು ಸಣ್ಣ ತಪ್ಪಾದರೆ, ಮತ್ತೆ ಯಾವುದು ದೊಡ್ಡ ತಪ್ಪು. ಬೊಮ್ಮಾಯಿ ಅವರೇ, ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ. ನೀವು ಯಾವ ಲೆಕ್ಕ. ನಿಮ್ಮನ್ನು ಹಾಗೇ ಬಿಡುತ್ತೇವೆ ಎಂದುಕೊಂಡಿರಾ ಎಂದು ಪ್ರಶ್ನೆ ಮಾಡಿದ್ದರು.

ಈ ಬಗ್ಗೆ ಹಿಂದು ಮಹಾಸಭಾದ ರಾಜ್ಯಾಧ್ಯಕ್ಷ ಎಂದು ಹೇಳಿಕೊಂಡ ಮತ್ತೊಬ್ಬ ವ್ಯಕ್ತಿ ಎಲ್.ಕೆ.ಸುವರ್ಣ ಎಂಬವರು ಧರ್ಮೇಂದ್ರ ಹೇಳಿಕೆಯನ್ನು ವಿರೋಧಿಸಿ ಮತ್ತು ತಮ್ಮ ಸಂಘಟನೆಯ ಹೆಸರನ್ನು ದುರುಪಯೋಗಪಡಿಸಿ ಹೇಳಿಕೆ ನೀಡಿದ್ದಾರೆ ಎಂದು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಧರ್ಮೇಂದ್ರ ಬಣದಲ್ಲಿ ರಾಜೇಶ್ ಪವಿತ್ರನ್ ಎಂಬವರು ರಾಜ್ಯಾಧ್ಯಕ್ಷರಾಗಿದ್ದು, ತಾನೇ ಅಧ್ಯಕ್ಷ ಎಂದು ಹೇಳಿಕೊಂಡಿದ್ದಲ್ಲದೆ, ಧರ್ಮೇಂದ್ರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ಆನಂತರ ಧರ್ಮೇಂದ್ರ ಜೊತೆಗೆ ರಾಜೇಶ್ ಪವಿತ್ರನ್ ಮತ್ತು ಇನ್ನೂ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore state president of Hindu Mahasabaha Rajesh Parivartan and Dharmendra arrested by Mangalore Police for threatening remarks against CM during a press meet held regarding demolition of temples in Karnataka
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm