ಬ್ರೇಕಿಂಗ್ ನ್ಯೂಸ್
19-09-21 05:17 pm Mangaluru Correspondent ಕರಾವಳಿ
ಮಂಗಳೂರು, ಸೆ.19: ಹಿಂದುಗಳಿಗೆ ಅನ್ಯಾಯ ಮಾಡಿದ ಗಾಂಧೀಜಿಯನ್ನೇ ಬಿಟ್ಟಿಲ್ಲ. ನೀವು ಯಾವ ಲೆಕ್ಕ ಎಂದು ಸಿಎಂ ಬೊಮ್ಮಾಯಿ ಉದ್ದೇಶಿಸಿ ಬೆದರಿಕೆ ಒಡ್ಡುವ ರೀತಿ ಹೇಳಿಕೆ ನೀಡಿದ್ದ ಹಿಂದು ಮಹಾಸಭಾ ಮುಖಂಡ ಧರ್ಮೇಂದ್ರ ಅಮೀನ್ ಅವರನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.


ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಹಿಂದು ಮಹಾಸಭಾ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ, ದೇವಸ್ಥಾನ ಒಡೆದ ವಿಚಾರವನ್ನು ಖಂಡಿಸುತ್ತಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆನಂತರ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಕೇವಲ ನಾಟಕ ಮಾತ್ರ. ಇವರಿಗೆ ಅಷ್ಟು ಅಭಿಮಾನ ಇದ್ದರೆ ಬಿಜೆಪಿಗೆ ಬೆಂಬಲ ನೀಡಬಾರದು. ದೇವಸ್ಥಾನ ಒಡೆದಿರುವ ವಿಚಾರವನ್ನು ಸಣ್ಣ ತಪ್ಪು ಅನ್ನುತ್ತಿದ್ದಾರೆ. ಇವರಿಗೆ ದೇವಸ್ಥಾನ ಒಡೆದು ಹಾಕಿದ್ದು ಸಣ್ಣ ತಪ್ಪಾದರೆ, ಮತ್ತೆ ಯಾವುದು ದೊಡ್ಡ ತಪ್ಪು. ಬೊಮ್ಮಾಯಿ ಅವರೇ, ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ. ನೀವು ಯಾವ ಲೆಕ್ಕ. ನಿಮ್ಮನ್ನು ಹಾಗೇ ಬಿಡುತ್ತೇವೆ ಎಂದುಕೊಂಡಿರಾ ಎಂದು ಪ್ರಶ್ನೆ ಮಾಡಿದ್ದರು.

ಈ ಬಗ್ಗೆ ಹಿಂದು ಮಹಾಸಭಾದ ರಾಜ್ಯಾಧ್ಯಕ್ಷ ಎಂದು ಹೇಳಿಕೊಂಡ ಮತ್ತೊಬ್ಬ ವ್ಯಕ್ತಿ ಎಲ್.ಕೆ.ಸುವರ್ಣ ಎಂಬವರು ಧರ್ಮೇಂದ್ರ ಹೇಳಿಕೆಯನ್ನು ವಿರೋಧಿಸಿ ಮತ್ತು ತಮ್ಮ ಸಂಘಟನೆಯ ಹೆಸರನ್ನು ದುರುಪಯೋಗಪಡಿಸಿ ಹೇಳಿಕೆ ನೀಡಿದ್ದಾರೆ ಎಂದು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಧರ್ಮೇಂದ್ರ ಬಣದಲ್ಲಿ ರಾಜೇಶ್ ಪವಿತ್ರನ್ ಎಂಬವರು ರಾಜ್ಯಾಧ್ಯಕ್ಷರಾಗಿದ್ದು, ತಾನೇ ಅಧ್ಯಕ್ಷ ಎಂದು ಹೇಳಿಕೊಂಡಿದ್ದಲ್ಲದೆ, ಧರ್ಮೇಂದ್ರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ಆನಂತರ ಧರ್ಮೇಂದ್ರ ಜೊತೆಗೆ ರಾಜೇಶ್ ಪವಿತ್ರನ್ ಮತ್ತು ಇನ್ನೂ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore state president of Hindu Mahasabaha Rajesh Parivartan and Dharmendra arrested by Mangalore Police for threatening remarks against CM during a press meet held regarding demolition of temples in Karnataka
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm