ಮಂಜೇಶ್ವರ ಶಾಸಕರ ರಾಜಿನಾಮೆ ಆಗ್ರಹಿಸಿ ಕರಿಪತಾಕೆ ಪ್ರದರ್ಶನ 

09-09-20 06:28 pm       Mangalore Reporter   ಕರಾವಳಿ

ಮಂಜೇಶ್ವರ ಶಾಸಕ ಎಂ.ಸಿ ಕಮರುದ್ದೀನ್ ರಾಜಿನಾಮೆಗೆ ಆಗ್ರಹಿಸಿ ಕಾಸರಗೋಡು ಜಿಲ್ಲೆಯ ಗ್ರಾ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

ಕಾಸರಗೋಡು, ಸೆಪ್ಟೆಂಬರ್ 8: ಕಾಸರಗೋಡು ಸೇರಿದಂತೆ ವಿವಿಧ ಕಡೆ ವಂಚನೆ ಪ್ರಕರಣಗಳನ್ನು ಎದುರಿಸುತ್ತಿರುವ ಮಂಜೇಶ್ವರ ಶಾಸಕ ಎಂ.ಸಿ ಕಮರುದ್ದೀನ್ ರಾಜಿನಾಮೆಗೆ ಆಗ್ರಹಿಸಿ ಕಾಸರಗೋಡು ಜಿಲ್ಲೆಯ ಗ್ರಾ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 

ಕುಂಬಳೆ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಇಲ್ಲದಿದ್ದರೆ ಪೊಲೀಸರು ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. 

ಕಪ್ಪು ಬಾವುಟ ಹಿಡಿದು ಕುಂಬಳೆ ಗ್ರಾಮ ಪಂಚಾಯಿತಿಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಶಾಸಕ ಕಮರುದ್ದೀನ್ ವಿರುದ್ಧ ಆರ್ಥಿಕ ವಂಚನೆ ಪ್ರಕರಣದಲ್ಲಿ 12ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.

Join our WhatsApp group for latest news updates