ಬ್ರೇಕಿಂಗ್ ನ್ಯೂಸ್
09-09-20 06:49 pm Mangalore Reporter ಕರಾವಳಿ
ಮಂಗಳೂರು, ಸೆ. 9: ಜಗದ್ವಿಖ್ಯಾತ ಮಂಗಳೂರು ದಸರಾಕ್ಕೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ಸರಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಈ ಬಾರಿಯೂ ಸಂಪ್ರದಾಯದಂತೆ ನಡೆಸಲು ನಿರ್ಧರಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ತಿಳಿಸಿದ್ದಾರೆ.
ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನೇತೃತ್ವದಲ್ಲಿ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಆಡಳಿತ ಮಂಡಳಿಯ ಸಭೆ ನಡೆದಿದ್ದು ದಸರಾ ಉತ್ಸವ ನಡೆಸಲು ನಿರ್ಧರಿಸಲಾಗಿದೆ.
ಮಂಗಳೂರು ದಸರಾ ಉತ್ಸವದಲ್ಲಿ ಧಾರ್ಮಿಕ ನಂಬಿಕೆಯ ಜತೆ ಕರಾವಳಿಯ ಆರ್ಥಿಕ ಪುನಶ್ಚೇತನವೂ ಅಡಗಿದೆ. ದಸರಾ ಸಂದರ್ಭ ಕೊರೊನಾ ದೇಶದಿಂದ ಮುಕ್ತಗೊಳ್ಳುವ ನಿಟ್ಟಿನಲ್ಲಿ ವಿಶೇಷ ಪ್ರಾರ್ಥನೆಯನ್ನು ನಡೆಸಲಾಗುವುದು. ಆದುದರಿಂದ ಯಾವುದೇ ಕಾರಣಕ್ಕೂ ಮಂಗಳೂರು ದಸರಾ ಮಹೋತ್ಸವವನ್ನು ನಿಲ್ಲಿಸಬಾರದು, ಎಂದಿನಂತೆ ವೈಭವದಿಂದ ನಡೆಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದು ಭಕ್ತರು, ಉದ್ಯಮಿಗಳು, ವ್ಯಾಪಾರಿಗಳು, ಹಿತೈಷಿಗಳ ವಲಯಗಳ ಅಭಿಪ್ರಾಯವೂ ಆಗಿದೆ ಎಂದು ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ದಸರಾ ಮಹೋತ್ಸವದಲ್ಲಿ ಎಂದಿನಂತೆ ದರ್ಬಾರು ಮಂಟಪದಲ್ಲಿ ಮಹಾಗಣಪತಿ, ಶಾರದೆ, ನವದುರ್ಗೆಯರ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದೆ. ಉಳಿದಂತೆ ದಸರಾ ಮಹೋತ್ಸವ ಸಂದರ್ಭ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡು ಆರೋಗ್ಯದ ಬಗ್ಗೆ ಎಚ್ಚರ ವಹಿಸುವ ನಿಟ್ಟಿನಲ್ಲಿ ಕ್ಷೇತ್ರದ ಆಡಳಿತ ಸಮಿತಿ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಇದಕ್ಕೆ ಭಕ್ತರ ಸಹಕಾರವೂ ಮುಖ್ಯವಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮೆರವಣಿಗೆ ಇರುವುದಿಲ್ಲ
ಮಂಗಳೂರು ದಸರಾದಲ್ಲಿ ಈ ಬಾರಿ ಟ್ಯಾಬ್ಲೋ, ದೇವರ ವಿಗ್ರಹಗಳ ಮೆರವಣಿಗೆ ಇರುವುದಿಲ್ಲ. ಕ್ಷೇತ್ರವನ್ನು ಸಂಪೂರ್ಣ ವಿದ್ಯುದ್ದೀಪಗಳಿಂದ ಅಲಂಕರಿಸಲಾಗುವುದು. ಆದರೆ ನಗರದಲ್ಲಿ ಯಾವುದೇ ಅಲಂಕಾರ ನಡೆಸದಿರಲು ನಿರ್ಧರಿಸಲಾಗಿದೆ.
ಮೂರ್ತಿ ರಚನೆ ಆರಂಭ
ದಸರಾ ಮಹೋತ್ಸವದಲ್ಲಿ ಪೂಜಿಸಲ್ಪಡುವ ಮೂರ್ತಿಗಳ ರಚನಾ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಸುಮಾರು 10ಕ್ಕೂ ಅಧಿಕ ಕಲಾವಿದರು ಇದರಲ್ಲಿ ತೊಡಗಿಸಿದ್ದಾರೆ. ನವರಾತ್ರಿ ಆರಂಭದಂದೇ ಗಣಪತಿ, ಶಾರದೆ ಸಹಿತ ಎಲ್ಲ ಮೂರ್ತಿಗಳು ಪ್ರತಿಷ್ಠಾಪನೆಗೊಳ್ಳಲಿದೆ. ಕೊರೊನಾ ಸೋಂಕಿನ ಮಧ್ಯೆಯೂ ಮಂಗಳೂರು ದಸರಾ ಮಹೋತ್ಸವ ಯಶಸ್ವಿಯಾಗಿ ನಡೆಯಬೇಕಾದರೆ ಕ್ಷೇತ್ರದ ಆಡಳಿತ ಮಂಡಳಿಯ ಜತೆ ಸಹಕಾರ ದೊಡ್ಡದು ಎಂದು ಜನಾರ್ದನ ಪೂಜಾರಿ ತಿಳಿಸಿದ್ದಾರೆ.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am