ಬ್ರೇಕಿಂಗ್ ನ್ಯೂಸ್
22-09-21 10:05 pm Headline Karnataka News Network ಕರಾವಳಿ
ಪುತ್ತೂರು, ಸೆ.22: 5 ಶೇಕಡಾ ಬಡ್ಡಿಯಲ್ಲಿ ಹತ್ತು ಲಕ್ಷ ಲೋನ್ ಮಾಡಿಸಿಕೊಡುವ ಆಮಿಷಕ್ಕೊಳಗಾದ ವ್ಯಕ್ತಿಯೊಬ್ಬ ಬರೋಬ್ಬರಿ ಏಳು ಲಕ್ಷ ರೂಪಾಯಿ ಕಳಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಮಕುಂಜ ಗ್ರಾಮದ ಮಹಮ್ಮದ್ ನಜೀರ್ ಎಂಬವರು ಹಣ ಕಳಕೊಂಡವರು. ಕಳೆದ ಜನವರಿಯಲ್ಲಿ ತನ್ನ ಮೊಬೈಲಿಗೆ ಕ್ಯಾಪಿಟಲ್ ಇಂಡಿಯಾ ಫೈನಾನ್ಸ್ ಲಿಮಿಟೆಡ್ ಎಂಬ ಹೆಸರಲ್ಲಿ ಮೆಸೇಜ್ ಬಂದಿತ್ತು. ಅಲ್ಲದೆ, ಲೋನ್ ಪಡೆಯಲು 9582853543 ನಂಬರಿಗೆ ಕರೆ ಮಾಡುವಂತೆ ತಿಳಿಸಲಾಗಿತ್ತು. ಸದ್ರಿ ನಂಬರಿಗೆ ಕರೆ ಮಾಡಿ ಮಾತನಾಡಿದಾಗ, 5 ಶೇ. ಬಡ್ಡಿಯಲ್ಲಿ 5 ಲಕ್ಷ ಲೋನ್ ನೀಡುವುದಾಗಿ ತಿಳಿಸಿದ್ದರು.
ಅದಕ್ಕಾಗಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಕಾಪಿ, ಫೋಟೋ ಕಳುಹಿಸಲು ಹೇಳಿದ್ದು, ಅವರು ಹೇಳಿದಂತೇ ಮಹಮ್ಮದ್ ನಜೀರ್ ಮಾಡಿದ್ದರು. ಆನಂತರ ವಿವಿಧ ಮೊಬೈಲ್ ನಂಬರ್ ಗಳಲ್ಲಿ ಕರೆ ಬಂದಿದ್ದು, ರಿಜಿಸ್ಟ್ರೇಶನ್, ಜಿಎಸ್ಟಿ ಹಾಗೂ ವಿವಿಧ ಚಾರ್ಜ್ ಹೆಸರಲ್ಲಿ ಹಣ ಕಳುಹಿಸಲು ತಿಳಿಸಿದ್ದಾರೆ. ಹಣವನ್ನು ಹಂತ ಹಂತವಾಗಿ ಕಳುಹಿಸಿದ್ದು ಒಟ್ಟು 5,20,727 ರೂಪಾಯಿ ಕಳುಹಿಸಿದ್ದಾರೆ. ಇದೇ ವೇಳೆ, ಬಜಾಜ್ ಸರ್ವ್ ಕಂಪನಿಯ ಹೆಸರಲ್ಲಿ ಮೆಸೇಜ್ ಬಂದಿದ್ದು, 7074047721 ನಂಬರಿಗೆ ಕರೆ ಮಾಡಲು ಸೂಚಿಸಲಾಗಿತ್ತು.
ಕರೆ ಮಾಡಿದಾಗ, 5 ಶೇ. ಬಡ್ಡಿಯಲ್ಲಿ 9 ಲಕ್ಷ ಲೋನ್ ತೆಗೆಸಿಕೊಡುವುದಾಗಿ ಹೇಳಿದ್ದರು. ಅಲ್ಲದೆ, ದಾಖಲಾತಿಗಳನ್ನು ಕಳುಹಿಸುವಂತೆ ತಿಳಿಸಿದ್ದರು. ರಿಜಿಸ್ಟ್ರೇಶನ್ ಮತ್ತು ವಿವಿಧ ರೀತಿಯ ಚಾರ್ಜಸ್ ಹೆಸರಲ್ಲಿ ಹಣ ಪಾವತಿಸಲು ಕೇಳಿದ್ದು, ಮಹಮ್ಮದ್ ನಜೀರ್ ಹಂತ ಹಂತವಾಗಿ 2,03,598 ರೂಪಾಯಿ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ಪಾವತಿಸಿದ್ದಾರೆ. ಈ ರೀತಿಯಾಗಿ ಒಟ್ಟು ಬರೋಬ್ಬರಿ 7,24,325 ರೂಪಾಯಿ ಹಣವನ್ನು ಕಳಕೊಂಡಿದ್ದು, ಮೋಸ ಹೋಗಿದ್ದಾರೆ. ಸಾಲ ಕೇಳಲು ಹೋಗಿದ್ದ ಮಹಮ್ಮದ್ ನಜೀರ್ ತಾನೇ ಅಪಾರ ಮೊತ್ತದ ಹಣವನ್ನು ಕಳಕೊಂಡಿದ್ದರು. ಇದೀಗ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಐಪಿಸಿ ಸೆಕ್ಷನ್ 419, 420 ಮತ್ತು 66 (ಡಿ), 66 (ಸಿ) ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Puttur Man falls trap to Double interest of Money loose Rs Seven Lakhs case registered. He fell trapped to the scam after he received a SMS on his phone.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 05:59 pm
Mangalore Correspondent
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm