ಬ್ರೇಕಿಂಗ್ ನ್ಯೂಸ್
24-09-21 04:41 pm Mangaluru Correspondent ಕರಾವಳಿ
ಮಂಗಳೂರು, ಸೆ.24: ಬಜ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಹೋಮ್ ಗಾರ್ಡ್ ಒಬ್ಬರು ಸುಟ್ಟ ಗಾಯಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಜ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದಾಗ, ಠಾಣೆಯೊಳಗೆ ಕ್ಲೀನ್ ಮಾಡಿ ತ್ಯಾಜ್ಯವನ್ನು ರಾಶಿ ಹಾಕಿ ಬೆಂಕಿ ಕೊಟ್ಟು ಉರಿಸುತ್ತಿದ್ದಾಗ ಏನೋ ಬ್ಲಾಸ್ಟ್ ಆಗಿದೆ ಎನ್ನಲಾಗುತ್ತಿದ್ದು, ಇದರಿಂದ ಹೋಮ್ ಗಾರ್ಡ್ ಮೈಯಲ್ಲಿ ಸುಟ್ಟ ಗಾಯಗಳಾಗಿವೆ. ಮುಖ, ತಲೆಯ ಹಿಂಭಾಗ, ಬೆನ್ನು, ಭುಜ, ಕೈಕಾಲು ಹೀಗೆ ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದು, ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಐಸಿಯು ವಿಭಾಗದಲ್ಲಿ ದಾಖಲು ಮಾಡಲಾಗಿದೆ.

ಸುಟ್ಟ ಗಾಯಗಳಾಗಿರುವ ವ್ಯಕ್ತಿಯನ್ನು ಕುಪ್ಪೆಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಕಳೆದ ಐದಾರು ವರ್ಷಗಳಿಂದ ಹೋಮ್ ಗಾರ್ಡ್ ಆಗಿ ದುಡಿಯುತ್ತಿರುವ ದಿನೇಶ್, ಮೂರು ದಿನಗಳ ಹಿಂದೆ ಠಾಣೆಯಲ್ಲಿ ಕಸವನ್ನು ಗುಡಿಸಿ, ಅದರೊಟ್ಟಿಗೆ ಹಳೆಯ ಫೈಲ್, ಇನ್ನಿತರ ತ್ಯಾಜ್ಯಗಳನ್ನು ರಾಶಿ ಹಾಕಿ ಬೆಂಕಿ ಕೊಟ್ಟಿದ್ದರು. ಈ ವೇಳೆ, ಏನೋ ಸ್ಫೋಟ ಆಗಿದ್ದು, ದೇಹ ಪೂರ್ತಿ ಸುಟ್ಟಿರುವ ಗಾಯಗಳಾಗಿವೆ. ಠಾಣೆಯ ಕಸದಲ್ಲಿ ಬ್ಲಾಸ್ಟ್ ಆಗುವಂಥ ತ್ಯಾಜ್ಯ ಏನಿತ್ತು ಅನ್ನೋದು ತಿಳಿದುಬಂದಿಲ್ಲ.
ಮದ್ಯದ ಬಾಟಲಿ ಅಥವಾ ಸ್ಯಾನಿಟೈಸರ್ ಬಾಟಲಿಗಳು ಬೆಂಕಿಯಲ್ಲಿ ಸುಡುವಾಗ ಸ್ಫೋಟ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಪೊಲೀಸ್ ಯೂನಿಫಾರ್ಮ್ ಹಾಕಿದ್ದರೂ, ಇಡೀ ದೇಹಕ್ಕೆ ಅಲ್ಲಲ್ಲಿ ಸುಟ್ಟ ಗಾಯಗಳಾಗಿದ್ದು ಹೇಗೆ ಎನ್ನುವ ಬಗ್ಗೆ ಆತನ ಸಂಬಂಧಿಕರು ಆತಂಕ ವ್ಯಕ್ತಪಡಿಸಿದ್ದಾರೆ.
Mangalore Bajpe Station Home guard seriously injured while disposing garbage of premises admitted at the hospital. Dinesh who was working at Bajpe Station was injured after a blast while disposing the garbage.
02-04-26 03:56 pm
HK News Staffer
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm