ಬ್ರೇಕಿಂಗ್ ನ್ಯೂಸ್
25-09-21 05:40 pm Mangaluru Correspondent ಕರಾವಳಿ
ಮಂಗಳೂರು, ಸೆ.25: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ಪೆಟ್ರೋಲಿಯಂ ಸ್ಥಾವರದಿಂದ ತ್ಯಾಜ್ಯವನ್ನು ಸಂಸ್ಕರಿಸದೆ, ಚರಂಡಿ ನೀರಿಗೆ ಬಿಡಲಾಗುತ್ತಿದೆ. ಈ ಬಗ್ಗೆ ಜೋಕಟ್ಟೆ ಭಾಗದ ಸ್ಥಳೀಯರು ಆರೋಪ ಮಾಡಿದ್ದು, ಚರಂಡಿಯಲ್ಲಿ ಪೆಟ್ರೋಲಿಯಂ ತ್ಯಾಜ್ಯ ಹರಿಯುವ ವಿಡಿಯೋ ಮಾಡಿ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು ಮಾಧ್ಯಮದ ಗಮನಕ್ಕೆ ತಂದಿದ್ದಾರೆ.
ಜೋಕಟ್ಟೆ ಭಾಗದಲ್ಲಿ ರಸ್ತೆ ಬದಿಯ ಚರಂಡಿ, ತೋಡಿನಲ್ಲಿ ಕೊಳಚೆ ನೀರಿನ ಜೊತೆ ಪೆಟ್ರೋಲಿಯಂ ತ್ಯಾಜ್ಯ ಹರಿಯುತ್ತಿದೆ. ಜೋಕಟ್ಟೆ - ತೋಕೂರು ಹಳ್ಳದ ಮೂಲಕ ತೋಡಿನಲ್ಲಿ ಪೆಟ್ರೋಲಿಯಂ ತ್ಯಾಜ್ಯ ಹರಿಯುತ್ತಿದ್ದು, ಅದು ನೇರವಾಗಿ ಬಂದು ಫಲ್ಗುಣಿ ನದಿ ಸೇರುತ್ತಿದೆ. ಈ ರೀತಿ ಪೆಟ್ರೋಲಿಯಂ ತ್ಯಾಜ್ಯವನ್ನು ಚರಂಡಿಗೆ ಬಿಡುವುದರಿಂದ ಸ್ಥಳೀಯ ಬಾವಿಗಳಿಗೂ ಪೆಟ್ರೋಲಿಯಂ ಅಂಶ ಸೇರುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.





ಈ ಬಗ್ಗೆ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅವರಲ್ಲಿ ಕೇಳಿದರೆ, ಪ್ರತಿ ಬಾರಿ ಮಳೆಗಾಲ, ಬೇಸಗೆ ಸಂದರ್ಭದಲ್ಲಿ ಕೆಲವೊಮ್ಮೆ ಈ ರೀತಿ ಪೆಟ್ರೋಲಿಯಂ ತ್ಯಾಜ್ಯವನ್ನು ಚರಂಡಿಗೆ ಬಿಡಲಾಗುತ್ತಿತ್ತು. ನಾಲ್ಕು ವರ್ಷಗಳಿಂದ ಈ ರೀತಿ ವಿಷಕಾರಿ ತ್ಯಾಜ್ಯವನ್ನು ಆಗಾಗ ಬಿಡುತ್ತಿದ್ದಾರೆ. ಈ ಬಗ್ಗೆ ಪರಿಸರ ನಿಯಂತ್ರಣ ಅಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೂ, ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಸ್ಥಳೀಯ ಜನರು ಇವರ ಕರ್ಮವನ್ನು ಅನುಭವಿಸಬೇಕಾಗಿದೆ. ಜನಪ್ರತಿನಿಧಿಗಳು ಅಸಡ್ಡೆ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಜೋಕಟ್ಟೆ ಬಳಿಯ ಮೂರನೇ ಹಂತದ ಎಂಆರ್ ಪಿಎಲ್ ಘಟಕದಿಂದ ಪೆಟ್ರೋಲಿಯಂ ತ್ಯಾಜ್ಯವನ್ನು ಹೊರ ಬಿಡಲಾಗಿದೆ. ಎಂಆರ್ ಪಿಎಲ್ ಆವರಣದ ಒಳಗಿನಿಂದಲೇ ಈ ರೀತಿ ಪೆಟ್ರೋಲ್, ಡೀಸೆಲ್ ರೀತಿಯ ತ್ಯಾಜ್ಯ ಚರಂಡಿ ಸೇರುತ್ತಿದೆ ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆ ಇದೇ ಭಾಗದಲ್ಲಿ ಎಂಆರ್ ಪಿಎಲ್ ಘಟಕದಿಂದ ಭಾರೀ ಪ್ರಮಾಣದಲ್ಲಿ ಬೆಂಕಿ ಹೊರಸೂಸುತ್ತಿತ್ತು. ಇದರಿಂದ ಸ್ಥಳೀಯರು ತೀವ್ರ ಆತಂಕಕ್ಕೂ ಒಳಗಾಗಿದ್ದರು.
Video:
Mangalore Petroleum waste from MRPL enters Palguni river DYFI demands action. Four days huge fire had broke out and residents state that this incident took place becausese of chemical waste getting out.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm