ಬ್ರೇಕಿಂಗ್ ನ್ಯೂಸ್
25-09-21 05:40 pm Mangaluru Correspondent ಕರಾವಳಿ
ಮಂಗಳೂರು, ಸೆ.25: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ಪೆಟ್ರೋಲಿಯಂ ಸ್ಥಾವರದಿಂದ ತ್ಯಾಜ್ಯವನ್ನು ಸಂಸ್ಕರಿಸದೆ, ಚರಂಡಿ ನೀರಿಗೆ ಬಿಡಲಾಗುತ್ತಿದೆ. ಈ ಬಗ್ಗೆ ಜೋಕಟ್ಟೆ ಭಾಗದ ಸ್ಥಳೀಯರು ಆರೋಪ ಮಾಡಿದ್ದು, ಚರಂಡಿಯಲ್ಲಿ ಪೆಟ್ರೋಲಿಯಂ ತ್ಯಾಜ್ಯ ಹರಿಯುವ ವಿಡಿಯೋ ಮಾಡಿ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು ಮಾಧ್ಯಮದ ಗಮನಕ್ಕೆ ತಂದಿದ್ದಾರೆ.
ಜೋಕಟ್ಟೆ ಭಾಗದಲ್ಲಿ ರಸ್ತೆ ಬದಿಯ ಚರಂಡಿ, ತೋಡಿನಲ್ಲಿ ಕೊಳಚೆ ನೀರಿನ ಜೊತೆ ಪೆಟ್ರೋಲಿಯಂ ತ್ಯಾಜ್ಯ ಹರಿಯುತ್ತಿದೆ. ಜೋಕಟ್ಟೆ - ತೋಕೂರು ಹಳ್ಳದ ಮೂಲಕ ತೋಡಿನಲ್ಲಿ ಪೆಟ್ರೋಲಿಯಂ ತ್ಯಾಜ್ಯ ಹರಿಯುತ್ತಿದ್ದು, ಅದು ನೇರವಾಗಿ ಬಂದು ಫಲ್ಗುಣಿ ನದಿ ಸೇರುತ್ತಿದೆ. ಈ ರೀತಿ ಪೆಟ್ರೋಲಿಯಂ ತ್ಯಾಜ್ಯವನ್ನು ಚರಂಡಿಗೆ ಬಿಡುವುದರಿಂದ ಸ್ಥಳೀಯ ಬಾವಿಗಳಿಗೂ ಪೆಟ್ರೋಲಿಯಂ ಅಂಶ ಸೇರುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.





ಈ ಬಗ್ಗೆ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅವರಲ್ಲಿ ಕೇಳಿದರೆ, ಪ್ರತಿ ಬಾರಿ ಮಳೆಗಾಲ, ಬೇಸಗೆ ಸಂದರ್ಭದಲ್ಲಿ ಕೆಲವೊಮ್ಮೆ ಈ ರೀತಿ ಪೆಟ್ರೋಲಿಯಂ ತ್ಯಾಜ್ಯವನ್ನು ಚರಂಡಿಗೆ ಬಿಡಲಾಗುತ್ತಿತ್ತು. ನಾಲ್ಕು ವರ್ಷಗಳಿಂದ ಈ ರೀತಿ ವಿಷಕಾರಿ ತ್ಯಾಜ್ಯವನ್ನು ಆಗಾಗ ಬಿಡುತ್ತಿದ್ದಾರೆ. ಈ ಬಗ್ಗೆ ಪರಿಸರ ನಿಯಂತ್ರಣ ಅಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೂ, ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಸ್ಥಳೀಯ ಜನರು ಇವರ ಕರ್ಮವನ್ನು ಅನುಭವಿಸಬೇಕಾಗಿದೆ. ಜನಪ್ರತಿನಿಧಿಗಳು ಅಸಡ್ಡೆ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಜೋಕಟ್ಟೆ ಬಳಿಯ ಮೂರನೇ ಹಂತದ ಎಂಆರ್ ಪಿಎಲ್ ಘಟಕದಿಂದ ಪೆಟ್ರೋಲಿಯಂ ತ್ಯಾಜ್ಯವನ್ನು ಹೊರ ಬಿಡಲಾಗಿದೆ. ಎಂಆರ್ ಪಿಎಲ್ ಆವರಣದ ಒಳಗಿನಿಂದಲೇ ಈ ರೀತಿ ಪೆಟ್ರೋಲ್, ಡೀಸೆಲ್ ರೀತಿಯ ತ್ಯಾಜ್ಯ ಚರಂಡಿ ಸೇರುತ್ತಿದೆ ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆ ಇದೇ ಭಾಗದಲ್ಲಿ ಎಂಆರ್ ಪಿಎಲ್ ಘಟಕದಿಂದ ಭಾರೀ ಪ್ರಮಾಣದಲ್ಲಿ ಬೆಂಕಿ ಹೊರಸೂಸುತ್ತಿತ್ತು. ಇದರಿಂದ ಸ್ಥಳೀಯರು ತೀವ್ರ ಆತಂಕಕ್ಕೂ ಒಳಗಾಗಿದ್ದರು.
Video:
Mangalore Petroleum waste from MRPL enters Palguni river DYFI demands action. Four days huge fire had broke out and residents state that this incident took place becausese of chemical waste getting out.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm