ಬ್ರೇಕಿಂಗ್ ನ್ಯೂಸ್
25-09-21 05:40 pm Mangaluru Correspondent ಕರಾವಳಿ
ಮಂಗಳೂರು, ಸೆ.25: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ಪೆಟ್ರೋಲಿಯಂ ಸ್ಥಾವರದಿಂದ ತ್ಯಾಜ್ಯವನ್ನು ಸಂಸ್ಕರಿಸದೆ, ಚರಂಡಿ ನೀರಿಗೆ ಬಿಡಲಾಗುತ್ತಿದೆ. ಈ ಬಗ್ಗೆ ಜೋಕಟ್ಟೆ ಭಾಗದ ಸ್ಥಳೀಯರು ಆರೋಪ ಮಾಡಿದ್ದು, ಚರಂಡಿಯಲ್ಲಿ ಪೆಟ್ರೋಲಿಯಂ ತ್ಯಾಜ್ಯ ಹರಿಯುವ ವಿಡಿಯೋ ಮಾಡಿ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು ಮಾಧ್ಯಮದ ಗಮನಕ್ಕೆ ತಂದಿದ್ದಾರೆ.
ಜೋಕಟ್ಟೆ ಭಾಗದಲ್ಲಿ ರಸ್ತೆ ಬದಿಯ ಚರಂಡಿ, ತೋಡಿನಲ್ಲಿ ಕೊಳಚೆ ನೀರಿನ ಜೊತೆ ಪೆಟ್ರೋಲಿಯಂ ತ್ಯಾಜ್ಯ ಹರಿಯುತ್ತಿದೆ. ಜೋಕಟ್ಟೆ - ತೋಕೂರು ಹಳ್ಳದ ಮೂಲಕ ತೋಡಿನಲ್ಲಿ ಪೆಟ್ರೋಲಿಯಂ ತ್ಯಾಜ್ಯ ಹರಿಯುತ್ತಿದ್ದು, ಅದು ನೇರವಾಗಿ ಬಂದು ಫಲ್ಗುಣಿ ನದಿ ಸೇರುತ್ತಿದೆ. ಈ ರೀತಿ ಪೆಟ್ರೋಲಿಯಂ ತ್ಯಾಜ್ಯವನ್ನು ಚರಂಡಿಗೆ ಬಿಡುವುದರಿಂದ ಸ್ಥಳೀಯ ಬಾವಿಗಳಿಗೂ ಪೆಟ್ರೋಲಿಯಂ ಅಂಶ ಸೇರುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.





ಈ ಬಗ್ಗೆ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅವರಲ್ಲಿ ಕೇಳಿದರೆ, ಪ್ರತಿ ಬಾರಿ ಮಳೆಗಾಲ, ಬೇಸಗೆ ಸಂದರ್ಭದಲ್ಲಿ ಕೆಲವೊಮ್ಮೆ ಈ ರೀತಿ ಪೆಟ್ರೋಲಿಯಂ ತ್ಯಾಜ್ಯವನ್ನು ಚರಂಡಿಗೆ ಬಿಡಲಾಗುತ್ತಿತ್ತು. ನಾಲ್ಕು ವರ್ಷಗಳಿಂದ ಈ ರೀತಿ ವಿಷಕಾರಿ ತ್ಯಾಜ್ಯವನ್ನು ಆಗಾಗ ಬಿಡುತ್ತಿದ್ದಾರೆ. ಈ ಬಗ್ಗೆ ಪರಿಸರ ನಿಯಂತ್ರಣ ಅಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೂ, ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಸ್ಥಳೀಯ ಜನರು ಇವರ ಕರ್ಮವನ್ನು ಅನುಭವಿಸಬೇಕಾಗಿದೆ. ಜನಪ್ರತಿನಿಧಿಗಳು ಅಸಡ್ಡೆ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಜೋಕಟ್ಟೆ ಬಳಿಯ ಮೂರನೇ ಹಂತದ ಎಂಆರ್ ಪಿಎಲ್ ಘಟಕದಿಂದ ಪೆಟ್ರೋಲಿಯಂ ತ್ಯಾಜ್ಯವನ್ನು ಹೊರ ಬಿಡಲಾಗಿದೆ. ಎಂಆರ್ ಪಿಎಲ್ ಆವರಣದ ಒಳಗಿನಿಂದಲೇ ಈ ರೀತಿ ಪೆಟ್ರೋಲ್, ಡೀಸೆಲ್ ರೀತಿಯ ತ್ಯಾಜ್ಯ ಚರಂಡಿ ಸೇರುತ್ತಿದೆ ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆ ಇದೇ ಭಾಗದಲ್ಲಿ ಎಂಆರ್ ಪಿಎಲ್ ಘಟಕದಿಂದ ಭಾರೀ ಪ್ರಮಾಣದಲ್ಲಿ ಬೆಂಕಿ ಹೊರಸೂಸುತ್ತಿತ್ತು. ಇದರಿಂದ ಸ್ಥಳೀಯರು ತೀವ್ರ ಆತಂಕಕ್ಕೂ ಒಳಗಾಗಿದ್ದರು.
Video:
Mangalore Petroleum waste from MRPL enters Palguni river DYFI demands action. Four days huge fire had broke out and residents state that this incident took place becausese of chemical waste getting out.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 08:22 pm
Mangalore Correspondent
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm