ಬ್ರೇಕಿಂಗ್ ನ್ಯೂಸ್
26-09-21 06:43 pm Mangaluru Correspondent ಕರಾವಳಿ
ಉಡುಪಿ, ಸೆ.26: ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ, ವಾಷಿಂಗ್ಟನ್ ಡಿಸಿಯಲ್ಲಿ ಉಡುಪಿ ಮೂಲದ ಹೊಟೇಲ್ ಉದ್ಯಮಿಗೆ ಸೇರಿದ ರೆಸ್ಟೋರೆಂಟಿಗೆ ತೆರಳಿ, ಉಡುಪಿ ಖಾದ್ಯವನ್ನು ಸವಿದಿದ್ದಾರೆ.
ಬೈಂದೂರು ಮೂಲದ ಆನಂದ್ ಪೂಜಾರಿ ಮತ್ತು ಸುಮಿತಾ ದಂಪತಿ ಕಳೆದ 35 ವರ್ಷಗಳಿಂದ ಅಮೆರಿಕದಲ್ಲಿದ್ದು, ವಾಷಿಂಗ್ಟನ್ ಡಿಸಿಯಲ್ಲಿ ವುಡ್ ಲ್ಯಾಂಡ್ಸ್ ಹೆಸರಲ್ಲಿ ಸ್ಟಾರ್ ಹೊಟೇಲ್ ನಡೆಸುತ್ತಿದ್ದಾರೆ. ಅಲ್ಲಿನ ಭಾರತೀಯರಿಗೆ ದಕ್ಷಿಣ ಭಾರತ ಶೈಲಿಯ ಆಹಾರ, ತಿನಿಸುಗಳನ್ನು ಮಾಡಿಕೊಡುತ್ತಿದ್ದಾರೆ. ಭಾರತೀಯ ಮೂಲದವರು, ಇಲ್ಲಿನ ಅಧಿಕಾರಿಗಳು, ಕೇಂದ್ರ ಸರಕಾರದ ಪ್ರತಿನಿಧಿಗಳು ವಾಷಿಂಗ್ಟನ್ ತೆರಳಿದರೇ ಇದೇ ಹೊಟೇಲಿಗೆ ಬಂದು ಆತಿಥ್ಯ ಪಡೆಯುತ್ತಾರೆ.

ಪ್ರಧಾನಿ ಮೋದಿ ವಾಷಿಂಗ್ಟನ್ ತೆರಳಿದ್ದರಿಂದ ಸೆ.24ರಂದು ಉಡುಪಿ ಮೂಲದ ಹೊಟೇಲ್ ನಲ್ಲಿ ಉಪಾಹಾರ ಸೇವಿಸಿದ್ದಾರೆ. ಇಡ್ಲಿ, ವಡೆ ಸಾಂಬಾರ್ ಮತ್ತು ಎರಡು ರೀತಿಯ ಸ್ವೀಟ್ ಐಟಂಗಳನ್ನು ಮೋದಿ ಸವಿದಿದ್ದಾರೆ. ಈ ಮೂಲಕ ಅಮೆರಿಕಕ್ಕೆ ತೆರಳಿದರೂ, ಉಡುಪಿ ಮೂಲದ ಖಾದ್ಯವನ್ನು ಸವಿಯುವ ಮೂಲಕ ಭಾರತೀಯ ಖಾದ್ಯಕ್ಕೆ ಮೋದಿ ಆದ್ಯತೆ ನೀಡಿದ್ದಾರೆ.
ಈ ವೇಳೆ, ಪ್ರಧಾನಿ ಮೋದಿ ಅವರನ್ನು ಆನಂದ್ ಪೂಜಾರಿ ದಂಪತಿ ಭೇಟಿಯಾಗಿದ್ದು, ಹಾರೈಕೆ ತಿಳಿಸಿದ್ದಾರೆ. ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿ ಮನೆಯ ಬಡಿಯ ಪೂಜಾರಿ – ಗಿರಿಜಾ ದಂಪತಿಯ ಮಗ ಆನಂದ್ ಪೂಜಾರಿ, 35 ವರ್ಷಗಳಿಂದ ಅಮೆರಿಕದಲ್ಲಿದ್ದರೂ, ಪ್ರತಿ ವರ್ಷ ಊರಿಗೆ ಬರುತ್ತಾರೆ. ಈ ಬಾರಿ ಕೊರೊನಾ ಸೋಂಕಿನ ಕಾರಣದಿಂದ ಮೂರು ವರ್ಷಗಳಿಂದ ಊರಿಗೆ ಬಂದಿರಲಿಲ್ಲ.
ಆನಂದ ಪೂಜಾರಿ ದಂಪತಿ ನಾಲ್ಕನೇ ಬಾರಿಗೆ ಮೋದಿಯನ್ನು ಭೇಟಿಯಾಗಿದ್ದು ಆತ್ಮೀಯವಾಗಿ ಮಾತುಕತೆ ನಡೆಸಿದ್ದಾರೆ. ಕ್ವಾಡ್ ಮೀಟ್ ಸಲುವಾಗಿ ಸೆ.23ರಂದು ಅಮೆರಿಕಕ್ಕೆ ತೆರಳಿದ್ದ ಮೋದಿ, ವಿಶ್ವಸಂಸ್ಥೆಯಲ್ಲಿ ಭಾಷಣ ಸೇರಿದಂತೆ ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿ ವಿಚಾರದಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.
Anand Poojary hosted the Prime Minister in United States and also took care of his diet. Anand Poojary along with his wife who have been living in Washington DC for about 35 years have been running Woodlands Hotel for 25 years,
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm