ಬ್ರೇಕಿಂಗ್ ನ್ಯೂಸ್
27-09-21 01:20 pm Mangaluru Correspondent ಕರಾವಳಿ
ಉಳ್ಳಾಲ, ಸೆ.27: ಹಿರಿಯ ಜನಪದ ವಿದ್ವಾಂಸರು, ಸಾಹಿತಿ ಪ್ರೊ.ಡಾ.ಅಮೃತ ಸೋಮೇಶ್ವರ ಅವರ 86ನೇ ಜನ್ಮದಿನದ ಪ್ರಯುಕ್ತ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ "ಗೌರವಶ್ರೀ" ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರದಾನ ಮಾಡಲಾಗುವ 2020ನೇ ಸಾಲಿನ ಗೌರವಶ್ರೀ ಪ್ರಶಸ್ತಿಗೆ ಮಂಗಳೂರಿನ ಹಿರಿಯ ಸಾಹಿತಿ ಮತ್ತು ಜನಪದ ವಿದ್ವಾಂಸರಾದ ಪ್ರೊ.ಡಾ.ಅಮೃತ ಸೋಮೇಶ್ವರ ಅವರನ್ನು ಆಯ್ಕೆ ಮಾಡಲಾಗಿತ್ತು. ಕಳೆದ ಸೆ.12 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆದಿತ್ತು. ಅನಾರೋಗ್ಯದ ಕಾರಣ ಸಾಹಿತಿ ಅಮೃತರಿಗೆ ಬೆಂಗಳೂರಿಗೆ ತೆರಳಲು ಆಗಿರಲಿಲ್ಲ. ಇಂದು ಅಮೃತರ ಸೋಮೇಶ್ವರದ ಸ್ವಗೃಹ ಒಲುಮೆಯಲ್ಲಿ "ಗೌರವ ಶ್ರೀ" ಪ್ರಶಸ್ತಿಯನ್ನು ಪ್ರದಾನಿಸಲಾಯಿತು.
ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಬಿ.ವಿ ವಸಂತ್ ಕುಮಾರ್ ಮಾತನಾಡಿ ಅಮೃತರಂತಹ ಮಹಾನ್ ಸಾಹಿತಿಗೆ ಪ್ರಶಸ್ತಿ ಪ್ರದಾನ ಮಾಡಿರುವುದರಿಂದ ಈ ಪ್ರಶಸ್ತಿಯ ಗೌರವ ಇಮ್ಮಡಿಯಾಗಿದೆ. ಅವರ ರಚನೆಯ "ಮಾನವತೆ ಗೆದ್ದಾಗ"ಎಂಬ ಕೃತಿಗೆ ಇಂದು ಅವರೇ ನಿದರ್ಶನರಾಗಿದ್ದಾರೆ. ಸುದೀರ್ಘ ಸಾಹಿತ್ಯ ಜೀವನದಲ್ಲಿ ಅವರು ಅಮೃತತ್ವವನ್ನು ಪ್ರಾಪ್ತಿಸಿದ್ದಾರೆ. ಅವರ ಜೀವನ ಶೈಲಿಯೇ ನಮಗೆಲ್ಲರಿಗೂ ಮಾದರಿ. ಅವರ ಮಾರ್ಗದರ್ಶನ ಅಕಾಡೆಮಿಗೆ ಮುಂದೆಯೂ ಅಗತ್ಯವಿದೆ ಎಂದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಾಹಿತಿ ಅಮೃತ ಸೋಮೇಶ್ವರ ಅವರು ಮನೆಯಲ್ಲೇ ಪ್ರಶಸ್ತಿ ಪ್ರದಾನದ ಸನ್ನಿವೇಶ ಸೃಷ್ಟಿಸಿದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿದರು. ನನ್ನ ಪಾಡಿಗೆ ನಾನು ಸಾಹಿತ್ಯ ಸೇವೆ ಮಾಡಿಕೊಂಡು ಬಂದಿದ್ದೇನೆ. ಆಶೆ ,ಆಕಾಂಕ್ಷೆ ಇಲ್ಲದೆ ನನ್ನ ಇತಿ, ಮಿತಿಯಲ್ಲಿ ಮಾಡಿದ ಕೆಲಸವನ್ನ ಗಮನಿಸಿ ಗೌರವಿಸಿದಕ್ಕೆ ಕೃತಜ್ಞತೆ ಅರ್ಪಿಸಿದರು.
ಅಕಾಡೆಮಿ ಅಧ್ಯಕ್ಷರು, ಪದಾಧಿಕಾರಿಗಳು, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಮೃತ ಸೋಮೇಶ್ವರ ಅವರು ಕೇಕ್ ಕತ್ತರಿಸಿ 86ನೇ ಹುಟ್ಟುದಿನವನ್ನ ಆಚರಿಸಲಾಯಿತು. ಅಮೃತರ ಮೊಮ್ಮಗಳಾದ ಸೃಷ್ಟಿ ಸೋಮೇಶ್ವರ ಅವರು ಅಜ್ಜನದ್ದೇ ಸಾಹಿತ್ಯದ 'ಎಂಚಿತ್ತಿ ಮಗನ್ ಪಡೆಯಲ್ ಪಾರ್ವತಿ...' ಎಂಬ ಭಕ್ತಿಗೀತೆಯನ್ನ ಹಾಡಿ ರಂಜಿಸಿದಳು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಆದ ಎನ್. ಕರಿಯಪ್ಪ , ಪದಾಧಿಕಾರಿಗಳಾದ ಹರೀಶ್ ಕುಮಾರ್, ಡಾ.ಬಿ.ಎಂ ಶರಭೇಂದ್ರ ಸ್ವಾಮಿ, ಮಂಗಳೂರು ಆಕಾಶವಾಣಿಯ ಸೂರ್ಯನಾರಾಯಣ ಭಟ್, ಅಮೃತ ಸೋಮೇಶ್ವರರ ಧರ್ಮ ಪತ್ನಿ ನರ್ಮದಾ, ಮಕ್ಕಳಾದ ಚೇತನ್ ಸೋಮೇಶ್ವರ, ಜೀವನ್ ಸೋಮೇಶ್ವರ, ಸೊಸೆಯಂದಿರಾದ ರಾಜೇಶ್ವರಿ, ಸತ್ಯ ಜೀವನ್, ಮೊಮ್ಮಕ್ಕಳಾದ ಸೃಜನ್ ಸೋಮೇಶ್ವರ, ಸೃಷ್ಟಿ ಸೋಮೇಶ್ವರ ಮೊದಲಾದವರು ಉಪಸ್ಥಿತರಿದ್ದರು.
Ullal Tulu scholar and writer Dr Amrut Someshwar honoured by Sahitya Academy awards Gourawa Shree on 86th birthday. The program was held in Someshwar in Mangalore.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
03-10-25 04:50 pm
HK News Desk
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
03-10-25 05:59 pm
Mangalore Correspondent
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm