ಬ್ರೇಕಿಂಗ್ ನ್ಯೂಸ್
27-09-21 01:20 pm Mangaluru Correspondent ಕರಾವಳಿ
ಉಳ್ಳಾಲ, ಸೆ.27: ಹಿರಿಯ ಜನಪದ ವಿದ್ವಾಂಸರು, ಸಾಹಿತಿ ಪ್ರೊ.ಡಾ.ಅಮೃತ ಸೋಮೇಶ್ವರ ಅವರ 86ನೇ ಜನ್ಮದಿನದ ಪ್ರಯುಕ್ತ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ "ಗೌರವಶ್ರೀ" ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರದಾನ ಮಾಡಲಾಗುವ 2020ನೇ ಸಾಲಿನ ಗೌರವಶ್ರೀ ಪ್ರಶಸ್ತಿಗೆ ಮಂಗಳೂರಿನ ಹಿರಿಯ ಸಾಹಿತಿ ಮತ್ತು ಜನಪದ ವಿದ್ವಾಂಸರಾದ ಪ್ರೊ.ಡಾ.ಅಮೃತ ಸೋಮೇಶ್ವರ ಅವರನ್ನು ಆಯ್ಕೆ ಮಾಡಲಾಗಿತ್ತು. ಕಳೆದ ಸೆ.12 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆದಿತ್ತು. ಅನಾರೋಗ್ಯದ ಕಾರಣ ಸಾಹಿತಿ ಅಮೃತರಿಗೆ ಬೆಂಗಳೂರಿಗೆ ತೆರಳಲು ಆಗಿರಲಿಲ್ಲ. ಇಂದು ಅಮೃತರ ಸೋಮೇಶ್ವರದ ಸ್ವಗೃಹ ಒಲುಮೆಯಲ್ಲಿ "ಗೌರವ ಶ್ರೀ" ಪ್ರಶಸ್ತಿಯನ್ನು ಪ್ರದಾನಿಸಲಾಯಿತು.



ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಬಿ.ವಿ ವಸಂತ್ ಕುಮಾರ್ ಮಾತನಾಡಿ ಅಮೃತರಂತಹ ಮಹಾನ್ ಸಾಹಿತಿಗೆ ಪ್ರಶಸ್ತಿ ಪ್ರದಾನ ಮಾಡಿರುವುದರಿಂದ ಈ ಪ್ರಶಸ್ತಿಯ ಗೌರವ ಇಮ್ಮಡಿಯಾಗಿದೆ. ಅವರ ರಚನೆಯ "ಮಾನವತೆ ಗೆದ್ದಾಗ"ಎಂಬ ಕೃತಿಗೆ ಇಂದು ಅವರೇ ನಿದರ್ಶನರಾಗಿದ್ದಾರೆ. ಸುದೀರ್ಘ ಸಾಹಿತ್ಯ ಜೀವನದಲ್ಲಿ ಅವರು ಅಮೃತತ್ವವನ್ನು ಪ್ರಾಪ್ತಿಸಿದ್ದಾರೆ. ಅವರ ಜೀವನ ಶೈಲಿಯೇ ನಮಗೆಲ್ಲರಿಗೂ ಮಾದರಿ. ಅವರ ಮಾರ್ಗದರ್ಶನ ಅಕಾಡೆಮಿಗೆ ಮುಂದೆಯೂ ಅಗತ್ಯವಿದೆ ಎಂದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಾಹಿತಿ ಅಮೃತ ಸೋಮೇಶ್ವರ ಅವರು ಮನೆಯಲ್ಲೇ ಪ್ರಶಸ್ತಿ ಪ್ರದಾನದ ಸನ್ನಿವೇಶ ಸೃಷ್ಟಿಸಿದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿದರು. ನನ್ನ ಪಾಡಿಗೆ ನಾನು ಸಾಹಿತ್ಯ ಸೇವೆ ಮಾಡಿಕೊಂಡು ಬಂದಿದ್ದೇನೆ. ಆಶೆ ,ಆಕಾಂಕ್ಷೆ ಇಲ್ಲದೆ ನನ್ನ ಇತಿ, ಮಿತಿಯಲ್ಲಿ ಮಾಡಿದ ಕೆಲಸವನ್ನ ಗಮನಿಸಿ ಗೌರವಿಸಿದಕ್ಕೆ ಕೃತಜ್ಞತೆ ಅರ್ಪಿಸಿದರು.


ಅಕಾಡೆಮಿ ಅಧ್ಯಕ್ಷರು, ಪದಾಧಿಕಾರಿಗಳು, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಮೃತ ಸೋಮೇಶ್ವರ ಅವರು ಕೇಕ್ ಕತ್ತರಿಸಿ 86ನೇ ಹುಟ್ಟುದಿನವನ್ನ ಆಚರಿಸಲಾಯಿತು. ಅಮೃತರ ಮೊಮ್ಮಗಳಾದ ಸೃಷ್ಟಿ ಸೋಮೇಶ್ವರ ಅವರು ಅಜ್ಜನದ್ದೇ ಸಾಹಿತ್ಯದ 'ಎಂಚಿತ್ತಿ ಮಗನ್ ಪಡೆಯಲ್ ಪಾರ್ವತಿ...' ಎಂಬ ಭಕ್ತಿಗೀತೆಯನ್ನ ಹಾಡಿ ರಂಜಿಸಿದಳು.
ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಆದ ಎನ್. ಕರಿಯಪ್ಪ , ಪದಾಧಿಕಾರಿಗಳಾದ ಹರೀಶ್ ಕುಮಾರ್, ಡಾ.ಬಿ.ಎಂ ಶರಭೇಂದ್ರ ಸ್ವಾಮಿ, ಮಂಗಳೂರು ಆಕಾಶವಾಣಿಯ ಸೂರ್ಯನಾರಾಯಣ ಭಟ್, ಅಮೃತ ಸೋಮೇಶ್ವರರ ಧರ್ಮ ಪತ್ನಿ ನರ್ಮದಾ, ಮಕ್ಕಳಾದ ಚೇತನ್ ಸೋಮೇಶ್ವರ, ಜೀವನ್ ಸೋಮೇಶ್ವರ, ಸೊಸೆಯಂದಿರಾದ ರಾಜೇಶ್ವರಿ, ಸತ್ಯ ಜೀವನ್, ಮೊಮ್ಮಕ್ಕಳಾದ ಸೃಜನ್ ಸೋಮೇಶ್ವರ, ಸೃಷ್ಟಿ ಸೋಮೇಶ್ವರ ಮೊದಲಾದವರು ಉಪಸ್ಥಿತರಿದ್ದರು.
Ullal Tulu scholar and writer Dr Amrut Someshwar honoured by Sahitya Academy awards Gourawa Shree on 86th birthday. The program was held in Someshwar in Mangalore.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm