ಬ್ರೇಕಿಂಗ್ ನ್ಯೂಸ್
27-09-21 08:06 pm Mangaluru Correspondent ಕರಾವಳಿ
ಮಂಗಳೂರು, ಸೆ.27: ಕೆಎಸ್ಸಾರ್ಟಿಸಿ ಡಿಪೋದಲ್ಲಿ ಚಾಲಕನಾಗಿ ಕರ್ತವ್ಯದಲ್ಲಿದ್ದು ಆರು ತಿಂಗಳ ಹಿಂದೆ ಅಮಾನತುಗೊಂಡಿದ್ದ ಬಾಗಲಕೋಟ ಜಿಲ್ಲೆಯ ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
15 ವರ್ಷಗಳಿಂದ ಮಂಗಳೂರು ಡಿಪೋದಲ್ಲಿ ಚಾಲಕ ವೃತ್ತಿಯಲ್ಲಿದ್ದ ಲಿಂಗಪ್ಪ(49) ಸಾವನ್ನಪ್ಪಿದ ವ್ಯಕ್ತಿ. ಹಿರಿಯಾಧಿಕಾರಿಗಳ ಜೊತೆ ದುರ್ನಡತೆ ತೋರಿದ ಆರೋಪದಲ್ಲಿ ಆತನನ್ನು ಕಳೆದ ಮಾರ್ಚ್ ನಲ್ಲಿ ಕೆಲಸದಿಂದ ಅಮಾನತು ಮಾಡಲಾಗಿತ್ತು. ಆನಂತರ, ಈ ಬಗ್ಗೆ ಇಲಾಖಾ ತನಿಖೆ ನಡೆಸಲಾಗುತ್ತಿತ್ತು. ಆರು ತಿಂಗಳಲ್ಲಿ ತನಿಖೆ ಪೂರ್ತಿಯಾಗಿದ್ದು, ಇನ್ನೊಂದು ವಾರದಲ್ಲಿ ಮತ್ತೆ ಕೆಲಸಕ್ಕೆ ಸೇರಬೇಕಾದ ಸಂದರ್ಭದಲ್ಲೇ ಸಾವಿಗೆ ಶರಣಾಗಿದ್ದಾನೆ.

ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿವಾಸಿ ಲಿಂಗಪ್ಪ ಮಂಗಳೂರು ನಗರದ ಕುಂಟಿಕಾನದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದ. ತೀವ್ರ ಕುಡಿತದ ಚಟ ಹೊಂದಿದ್ದರಿಂದ ವೃತ್ತಿಯಲ್ಲಿದ್ದಾಗಲೂ ಮೇಲಧಿಕಾರಿಗಳ ಸೂಚನೆ ಪಾಲಿಸುತ್ತಿರಲಿಲ್ಲ ಎನ್ನುವ ಆರೋಪಗಳಿದ್ದವು. ಕಳೆದ ಬಾರಿ, ಬಸ್ಸನ್ನು ಡಿಪೋಗೆ ತಲುಪಿಸು ಎಂದು ಡಿಪೋ ಮ್ಯಾನೇಜರ್ ಸೂಚನೆ ನೀಡಿದರೂ, ಅದನ್ನು ಕೇಳಿರಲಿಲ್ಲ. ಅದೇ ನೆಪ ಇಟ್ಟುಕೊಂಡು ಡಿಪೋ ಅಧಿಕಾರಿ ಲಿಂಗಪ್ಪನನ್ನು ಕೆಲಸದಿಂದ ಅಮಾನತುಗೊಳಿಸಿದ್ದರು.
ಆದರೆ, ಮೇಲಧಿಕಾರಿಗಳ ಕಿರುಕುಳ ಕಾರಣದಿಂದಲೇ ಲಿಂಗಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಬಗ್ಗೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಡೀಸಿ ಅರುಣ್ ಬಳಿ ಕೇಳಿದರೆ, ಆತನಿಗೆ ಫ್ಯಾಮಿಲಿ ಪ್ರಾಬ್ಲಂ ಇತ್ತು. ಕರ್ತವ್ಯದಿಂದ ಸಸ್ಪೆಂಡ್ ಆಗಿದ್ದರೂ, ರಿವೋಕ್ ಮಾಡಿಸಲು ಯತ್ನ ನಡೆದಿತ್ತು. ಇನ್ನೊಂದು ವಾರದಲ್ಲಿ ಕರ್ತವ್ಯಕ್ಕೆ ಮರಳಬಹುದಿತ್ತು. ಆದರೆ, ಅಷ್ಟರಲ್ಲೇ ದುರಂತ ತಂದುಕೊಂಡಿದ್ದಾನೆ. ಯಾಕಾಗಿ ಸಾವಿಗೆ ಶರಣಾಗಿದ್ದಾನೆಂದು ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
Suspended KSRTC driver commits suicide at his residence in Mangalore family allege torture of officers. The deceased has been identified as Lingappa (49). He was working in Mangalore depo since 15 years. It is said that he was suspended because he was addicted to alcohol during duty hours.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am