ಬ್ರೇಕಿಂಗ್ ನ್ಯೂಸ್
27-09-21 08:06 pm Mangaluru Correspondent ಕರಾವಳಿ
ಮಂಗಳೂರು, ಸೆ.27: ಕೆಎಸ್ಸಾರ್ಟಿಸಿ ಡಿಪೋದಲ್ಲಿ ಚಾಲಕನಾಗಿ ಕರ್ತವ್ಯದಲ್ಲಿದ್ದು ಆರು ತಿಂಗಳ ಹಿಂದೆ ಅಮಾನತುಗೊಂಡಿದ್ದ ಬಾಗಲಕೋಟ ಜಿಲ್ಲೆಯ ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
15 ವರ್ಷಗಳಿಂದ ಮಂಗಳೂರು ಡಿಪೋದಲ್ಲಿ ಚಾಲಕ ವೃತ್ತಿಯಲ್ಲಿದ್ದ ಲಿಂಗಪ್ಪ(49) ಸಾವನ್ನಪ್ಪಿದ ವ್ಯಕ್ತಿ. ಹಿರಿಯಾಧಿಕಾರಿಗಳ ಜೊತೆ ದುರ್ನಡತೆ ತೋರಿದ ಆರೋಪದಲ್ಲಿ ಆತನನ್ನು ಕಳೆದ ಮಾರ್ಚ್ ನಲ್ಲಿ ಕೆಲಸದಿಂದ ಅಮಾನತು ಮಾಡಲಾಗಿತ್ತು. ಆನಂತರ, ಈ ಬಗ್ಗೆ ಇಲಾಖಾ ತನಿಖೆ ನಡೆಸಲಾಗುತ್ತಿತ್ತು. ಆರು ತಿಂಗಳಲ್ಲಿ ತನಿಖೆ ಪೂರ್ತಿಯಾಗಿದ್ದು, ಇನ್ನೊಂದು ವಾರದಲ್ಲಿ ಮತ್ತೆ ಕೆಲಸಕ್ಕೆ ಸೇರಬೇಕಾದ ಸಂದರ್ಭದಲ್ಲೇ ಸಾವಿಗೆ ಶರಣಾಗಿದ್ದಾನೆ.

ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿವಾಸಿ ಲಿಂಗಪ್ಪ ಮಂಗಳೂರು ನಗರದ ಕುಂಟಿಕಾನದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದ. ತೀವ್ರ ಕುಡಿತದ ಚಟ ಹೊಂದಿದ್ದರಿಂದ ವೃತ್ತಿಯಲ್ಲಿದ್ದಾಗಲೂ ಮೇಲಧಿಕಾರಿಗಳ ಸೂಚನೆ ಪಾಲಿಸುತ್ತಿರಲಿಲ್ಲ ಎನ್ನುವ ಆರೋಪಗಳಿದ್ದವು. ಕಳೆದ ಬಾರಿ, ಬಸ್ಸನ್ನು ಡಿಪೋಗೆ ತಲುಪಿಸು ಎಂದು ಡಿಪೋ ಮ್ಯಾನೇಜರ್ ಸೂಚನೆ ನೀಡಿದರೂ, ಅದನ್ನು ಕೇಳಿರಲಿಲ್ಲ. ಅದೇ ನೆಪ ಇಟ್ಟುಕೊಂಡು ಡಿಪೋ ಅಧಿಕಾರಿ ಲಿಂಗಪ್ಪನನ್ನು ಕೆಲಸದಿಂದ ಅಮಾನತುಗೊಳಿಸಿದ್ದರು.
ಆದರೆ, ಮೇಲಧಿಕಾರಿಗಳ ಕಿರುಕುಳ ಕಾರಣದಿಂದಲೇ ಲಿಂಗಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಬಗ್ಗೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಡೀಸಿ ಅರುಣ್ ಬಳಿ ಕೇಳಿದರೆ, ಆತನಿಗೆ ಫ್ಯಾಮಿಲಿ ಪ್ರಾಬ್ಲಂ ಇತ್ತು. ಕರ್ತವ್ಯದಿಂದ ಸಸ್ಪೆಂಡ್ ಆಗಿದ್ದರೂ, ರಿವೋಕ್ ಮಾಡಿಸಲು ಯತ್ನ ನಡೆದಿತ್ತು. ಇನ್ನೊಂದು ವಾರದಲ್ಲಿ ಕರ್ತವ್ಯಕ್ಕೆ ಮರಳಬಹುದಿತ್ತು. ಆದರೆ, ಅಷ್ಟರಲ್ಲೇ ದುರಂತ ತಂದುಕೊಂಡಿದ್ದಾನೆ. ಯಾಕಾಗಿ ಸಾವಿಗೆ ಶರಣಾಗಿದ್ದಾನೆಂದು ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
Suspended KSRTC driver commits suicide at his residence in Mangalore family allege torture of officers. The deceased has been identified as Lingappa (49). He was working in Mangalore depo since 15 years. It is said that he was suspended because he was addicted to alcohol during duty hours.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm