ಬ್ರೇಕಿಂಗ್ ನ್ಯೂಸ್
27-09-21 08:06 pm Mangaluru Correspondent ಕರಾವಳಿ
ಮಂಗಳೂರು, ಸೆ.27: ಕೆಎಸ್ಸಾರ್ಟಿಸಿ ಡಿಪೋದಲ್ಲಿ ಚಾಲಕನಾಗಿ ಕರ್ತವ್ಯದಲ್ಲಿದ್ದು ಆರು ತಿಂಗಳ ಹಿಂದೆ ಅಮಾನತುಗೊಂಡಿದ್ದ ಬಾಗಲಕೋಟ ಜಿಲ್ಲೆಯ ಮೂಲದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
15 ವರ್ಷಗಳಿಂದ ಮಂಗಳೂರು ಡಿಪೋದಲ್ಲಿ ಚಾಲಕ ವೃತ್ತಿಯಲ್ಲಿದ್ದ ಲಿಂಗಪ್ಪ(49) ಸಾವನ್ನಪ್ಪಿದ ವ್ಯಕ್ತಿ. ಹಿರಿಯಾಧಿಕಾರಿಗಳ ಜೊತೆ ದುರ್ನಡತೆ ತೋರಿದ ಆರೋಪದಲ್ಲಿ ಆತನನ್ನು ಕಳೆದ ಮಾರ್ಚ್ ನಲ್ಲಿ ಕೆಲಸದಿಂದ ಅಮಾನತು ಮಾಡಲಾಗಿತ್ತು. ಆನಂತರ, ಈ ಬಗ್ಗೆ ಇಲಾಖಾ ತನಿಖೆ ನಡೆಸಲಾಗುತ್ತಿತ್ತು. ಆರು ತಿಂಗಳಲ್ಲಿ ತನಿಖೆ ಪೂರ್ತಿಯಾಗಿದ್ದು, ಇನ್ನೊಂದು ವಾರದಲ್ಲಿ ಮತ್ತೆ ಕೆಲಸಕ್ಕೆ ಸೇರಬೇಕಾದ ಸಂದರ್ಭದಲ್ಲೇ ಸಾವಿಗೆ ಶರಣಾಗಿದ್ದಾನೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿವಾಸಿ ಲಿಂಗಪ್ಪ ಮಂಗಳೂರು ನಗರದ ಕುಂಟಿಕಾನದಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸವಿದ್ದ. ತೀವ್ರ ಕುಡಿತದ ಚಟ ಹೊಂದಿದ್ದರಿಂದ ವೃತ್ತಿಯಲ್ಲಿದ್ದಾಗಲೂ ಮೇಲಧಿಕಾರಿಗಳ ಸೂಚನೆ ಪಾಲಿಸುತ್ತಿರಲಿಲ್ಲ ಎನ್ನುವ ಆರೋಪಗಳಿದ್ದವು. ಕಳೆದ ಬಾರಿ, ಬಸ್ಸನ್ನು ಡಿಪೋಗೆ ತಲುಪಿಸು ಎಂದು ಡಿಪೋ ಮ್ಯಾನೇಜರ್ ಸೂಚನೆ ನೀಡಿದರೂ, ಅದನ್ನು ಕೇಳಿರಲಿಲ್ಲ. ಅದೇ ನೆಪ ಇಟ್ಟುಕೊಂಡು ಡಿಪೋ ಅಧಿಕಾರಿ ಲಿಂಗಪ್ಪನನ್ನು ಕೆಲಸದಿಂದ ಅಮಾನತುಗೊಳಿಸಿದ್ದರು.
ಆದರೆ, ಮೇಲಧಿಕಾರಿಗಳ ಕಿರುಕುಳ ಕಾರಣದಿಂದಲೇ ಲಿಂಗಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಬಗ್ಗೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಡೀಸಿ ಅರುಣ್ ಬಳಿ ಕೇಳಿದರೆ, ಆತನಿಗೆ ಫ್ಯಾಮಿಲಿ ಪ್ರಾಬ್ಲಂ ಇತ್ತು. ಕರ್ತವ್ಯದಿಂದ ಸಸ್ಪೆಂಡ್ ಆಗಿದ್ದರೂ, ರಿವೋಕ್ ಮಾಡಿಸಲು ಯತ್ನ ನಡೆದಿತ್ತು. ಇನ್ನೊಂದು ವಾರದಲ್ಲಿ ಕರ್ತವ್ಯಕ್ಕೆ ಮರಳಬಹುದಿತ್ತು. ಆದರೆ, ಅಷ್ಟರಲ್ಲೇ ದುರಂತ ತಂದುಕೊಂಡಿದ್ದಾನೆ. ಯಾಕಾಗಿ ಸಾವಿಗೆ ಶರಣಾಗಿದ್ದಾನೆಂದು ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
Suspended KSRTC driver commits suicide at his residence in Mangalore family allege torture of officers. The deceased has been identified as Lingappa (49). He was working in Mangalore depo since 15 years. It is said that he was suspended because he was addicted to alcohol during duty hours.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm