ಬ್ರೇಕಿಂಗ್ ನ್ಯೂಸ್
28-09-21 09:09 am Mangaluru Correspondent ಕರಾವಳಿ
ಮಂಗಳೂರು, ಸೆ.28: ಸುರತ್ಕಲ್ ಹೆದ್ದಾರಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿರುವುದು ಬೆಳಕಿಗೆ ಬಂದಿದೆ. ಮಲ್ಪೆ ಬೀಚ್ ಗೆ ತೆರಳಿ, ವಾಪಸಾಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಯುವಕರ ಗುಂಪು ಮುಗಿಬಿದ್ದಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾಗಿದೆ.
ಬೊಲೆರೋ ವಾಹನದಲ್ಲಿ ದೇರಳಕಟ್ಟೆಯ ಖಾಸಗಿ ಕಾಲೇಜಿನ ಮೆಡಿಕಲ್ ವಿದ್ಯಾರ್ಥಿಗಳು ಸೇರಿದಂತೆ ಯುವಕ- ಯುವತಿಯರು ಮಲ್ಪೆ ಬೀಚ್ ಗೆ ತೆರಳಿ ಮಂಗಳೂರಿನತ್ತ ಬರುತ್ತಿದ್ದರು. ಈ ವೇಳೆ, ಹಿಂದು ಸಂಘಟನೆಗೆ ಸೇರಿದ ಯುವಕರ ಗುಂಪು ಅಡ್ಡಗಟ್ಟಿದ್ದು ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಲು ಮುಂದಾಗಿದೆ. ಈ ವೇಳೆ, ಸಿವಿಲ್ ಡ್ರೆಸ್ ನಲ್ಲಿದ್ದ ಮಂಗಳೂರಿನ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಯುವಕರನ್ನು ತಡೆದಿದ್ದು ಹೊಡೆಯಬೇಡಿ ಎನ್ನುತ್ತಾ ಯುವಕರನ್ನು ಅಂಗಲಾಚಿದ್ದಾರೆ.




ಆದರೆ, ಯುವಕರು ಪೊಲೀಸ್ ಅಧಿಕಾರಿಯ ಮಾತು ಕೇಳದೆ ಬೊಲೆರೋ ವಾಹನಕ್ಕೆ ಕೈ ತುರುಕಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಇದರ ವಿಡಿಯೋವನ್ನು ಸ್ಥಳೀಯರು ರೆಕಾರ್ಡ್ ಮಾಡಿದ್ದು ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ಭಾರೀ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಸುರತ್ಕಲ್ ಪೊಲೀಸರು ಐವರನ್ನ ವಶಕ್ಕೆ ಪಡೆದಿದ್ದಾರೆ.
ಹಲ್ಲೆ ನಡೆಸಿದ್ದ ಐವರು ಯುವಕರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ ಗೇಟ್ ಬಳಿ ಘಟನೆ ನಡೆದಿದ್ದು ಯುವಕರ ಗೂಂಡಾಗಿರಿ ವಿಡಿಯೋದಲ್ಲಿ ಸೆರೆಯಾಗಿದ್ದು ಅದನ್ನು ಆಧರಿಸಿ ಪೊಲೀಸರು ಕ್ರಮ ಜರುಗಿಸಿದ್ದಾರೆ. ವಾಹನದಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳು ಇದ್ದರು ಅನ್ನುವ ಮಾಹಿತಿ ಹಿನ್ನೆಲೆ ಹಿಂದೂ ಕಾರ್ಯಕರ್ತರು ಗೂಂಡಾಗಿರಿ ಮೆರೆದಿದ್ದಾರೆ.
Five youths were arrested for Moral policing at surathkal toll Plaza by assaulting Medical Students of different communities inside the car. The incident took place when they were returning back from Beach. The Video of this has gone viral on social media. Surathkal Police have arrested five youths in connection to this case.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm