ಬ್ರೇಕಿಂಗ್ ನ್ಯೂಸ್
28-09-21 02:53 pm Mangaluru Correspondent ಕರಾವಳಿ
ಉಳ್ಳಾಲ, ಸೆ.28: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಊರಿನ ರಸ್ತೆ ಹದಗೆಟ್ಟಿರುವುದರ ಬಗ್ಗೆ ಪ್ರಧಾನಿ ಕಾರ್ಯಾಲಯಕ್ಕೆ ಮನವಿ ಸಲ್ಲಿಸಿದ ಪರಿಣಾಮ ಇದೀಗ ಕೆಟ್ಟು ಕೆರ ಹಿಡಿದಿದ್ದ ರಸ್ತೆ ಕಾಂಕ್ರಿಟೀಕರಣಗೊಂಡಿದ್ದು ಊರಿನ ಜನ ಹರ್ಷಗೊಂಡಿದ್ದಾರೆ.
ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವರುಣ್ ಎಂ. ಕೊಲ್ಯ ರಸ್ತೆ ಕಾಂಕ್ರಿಟೀಕರಣಕ್ಕೆ ಪ್ರಧಾನಿ ಕಾರ್ಯಾಲಯದ ಕದ ತಟ್ಟಿದ ವಿದ್ಯಾರ್ಥಿ.
ವರುಣ್ ನಿವಾಸವಿರುವ ಕೊಲ್ಯ ಮೂರನೇ ಅಡ್ಡ ರಸ್ತೆಯ(ಮಳಯಾಳ ಚಾಮುಂಡಿ ದೈವಸ್ಥಾನ ರಸ್ತೆ) ಪರಿಯತ್ತೂರು ರಸ್ತೆಯು ಕಳೆದ ಇಪ್ಪತ್ತು ವರುಷಗಳಿಂದ ಡಾಮರನ್ನೂ ಕಾಣದೆ ನಾದುರಸ್ಥಿಯಲ್ಲಿತ್ತು. ಈ ಬಗ್ಗೆ ಸ್ಥಳೀಯ ಸೋಮೇಶ್ವರ ಪುರಸಭಾ ಆಡಳಿತ ಮತ್ತು ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಫಲ ಕಂಡಿರಲಿಲ್ಲ.
ಕಳೆದ 2020 ನೇ ಇಸವಿಯ ಸೆಪ್ಟೆಂಬರ್ 17ರಂದು ವರುಣ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ತಮ್ಮೂರಿನ ಹದಗೆಟ್ಟ ರಸ್ತೆಯ ಬಗ್ಗೆ ವಿವರವಾಗಿ ಉಲ್ಲೇಖಿಸಿ ಕಾಯಕಲ್ಪ ಒದಗಿಸುವಂತೆ ಕೋರಿ ಪತ್ರ ಬರೆದು ಸ್ಪೀಡ್ ಪೋಸ್ಟ್ ಮುಖಾಂತರ ರವಾನಿಸಿದ್ದರು.
ವರುಣ್ ಮನವಿಗೆ ಪ್ರಧಾನಿ ಕಾರ್ಯಾಲಯವು ಸ್ಪಂದನೆ ನೀಡಿದೆ. ಪರಿಣಾಮ ಸೋಮೇಶ್ವರ ಪುರಸಭೆಯ ಮುಖಾಂತರ ಸುಮಾರು ನಾಲ್ಕು ಲಕ್ಷ ರೂಪಾಯಿ ಅನುದಾನದಲ್ಲಿ ಇದೀಗ ಪರಿಯತ್ತೂರು ರಸ್ತೆಯು ಕಾಂಕ್ರಿಟೀಕರಣಗೊಂಡಿದೆ. ರಸ್ತೆಯ ಮುಂದಿನ ಕಾಂಕ್ರಿಟೀಕರಣಕ್ಕೂ ಸೋಮೇಶ್ವರ ಪುರಸಭೆಯಿಂದ ಅನುದಾನ ಮೀಸಲಿಡಲಾಗಿದೆ.
ವರುಣ್ ಅವರ ಮನವಿಗೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯದ ಕಾರ್ಯ ವೈಖರಿಗೆ ಕೋಟೆಕಾರು ಪಂಚಾಯತ್ ಮಾಜಿ ಅಧ್ಯಕ್ಷರಾದ ಶೇಖರ್ ಕಣೀರುತೋಟ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪರಿಯತ್ತೂರು ನಿವಾಸಿಗಳಾದ ಮೋಹನ್ ದಾಸ್ ಗಟ್ಟಿ , ಸುಜಾತ ದಂಪತಿಗಳ ಮೂವರು ಪುತ್ರರಲ್ಲಿ ಸುಹಾನ್ ಹಿರಿಯವನಾದರೆ, ವರುಣ್ ಮತ್ತು ವೈಶಾಕ್ ಅವಳಿ ಸಹೋದರರಾಗಿದ್ದಾರೆ. ಪ್ರಧಾನಿಗೆ ಪತ್ರ ಬರೆದು ತನ್ನೂರಿನ ಹದಗೆಟ್ಟ ರಸ್ತೆಗೆ ಕಾಯಕಲ್ಪ ಒದಗಿಸಿದ ಯುವಕ ವರುಣ್ ಅವರ ಕಾರ್ಯವನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ.
Prime Minister Modi replies to letter of Engineering student of Kolya Mangalore over bad roads now gets concentrate road. Varun a student of Shayadri college had posted letter to PM on Sep 2020 regarding bad roads for which the PMO office ordered for concentrate road and now re sidents are happy.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm