ಬ್ರೇಕಿಂಗ್ ನ್ಯೂಸ್
28-09-21 10:30 pm Headline Karnataka News Network ಕರಾವಳಿ
ಉಳ್ಳಾಲ, ಸೆ.28: ಉಳ್ಳಾಲದ ಅಬ್ಬಕ್ಕ ಸರ್ಕಲ್ ನಿಂದ ಓವರ್ ಬ್ರಿಡ್ಜ್ ತನಕದ ಚತುಷ್ಪಥ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಾಣವಾಗಲಿದ್ದು ಶಾಸಕ ಯು.ಟಿ ಖಾದರ್ ಅವರು ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.
ಉಳ್ಳಾಲ ಅಬ್ಬಕ್ಕ ಸರ್ಕಲ್ ನಿಂದ ತೊಕ್ಕೊಟ್ಟು ಓವರ್ ಬ್ರಿಡ್ಜ್ ತನಕದ ರಾಜ ರಸ್ತೆಯು ಶಾಸಕ ಯು.ಟಿ.ಖಾದರ್ ಮುತುವರ್ಜಿಯಿಂದ ವರ್ಷಗಳ ಹಿಂದೆ ಚತುಷ್ಪಥ ರಸ್ತೆಯಾಗಿ ಕಾಂಕ್ರಿಟೀಕರಣಗೊಂಡಿತ್ತು. ಇದೀಗ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲ ಸಂಪರ್ಕದ ಚತುಷ್ಪಥ ರಾಜ ರಸ್ತೆಯ ಇಕ್ಕೆಲಗಳಿಗೆ ಲೋಕೋಪಯೋಗಿ ಇಲಾಖೆಯ 4.30 ಕೋಟಿ ರೂಪಾಯಿ ಅನುದಾನದಿಂದ ಸರ್ವಿಸ್ ರಸ್ತೆ ನಿರ್ಮಾಣವಾಗಲಿದ್ದು ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಅವರು ನೂತನ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.



ಈ ವೇಳೆ ಮಾತನಾಡಿದ ಖಾದರ್ ಬೆಳೆಯುತ್ತಿರುವ ಉಳ್ಳಾಲದ ಮುಖ್ಯ ರಸ್ತೆಯು ಸುಸಜ್ಜಿತ, ಸುಂದರವಾಗಿರಬೇಕು. ಉಳ್ಳಾಲದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳಿದ್ದು ವಿದ್ಯಾರ್ಥಿಗಳಿಗೆ ರಸ್ತೆಯಲ್ಲಿ ಯಾವುದೇ ತೊಂದರೆಗಳಾಗದಂತೆ ತಡೆಯಲು ಸರ್ವಿಸ್ ರಸ್ತೆಯಲ್ಲೇ ಬೈಕ್ ಮತ್ತು ಸೈಕಲ್ ಸವಾರಿಗೆ ಸ್ಪೆಷಲ್ ಟ್ರ್ಯಾಕ್ ಒದಗಿಸಲಾಗಿದೆ. ಡ್ರೈನ್ ಮೇಲೆ ನಡೆದಾಡಲು ಪಾತ್ ವೇಯನ್ನೂ ಕಲ್ಪಿಸಲಾಗಿದೆ. ಮುಂದೆ ಅಬ್ಬಕ್ಕ ಸರ್ಕಲ್ ನಿಂದ ಮುಕ್ಕಚ್ಚೇರಿ ರಸ್ತೆಯನ್ನೂ ಸ್ಮಾರ್ಟ್ ರಸ್ತೆಯನ್ನಾಗಿಸಲು ಲೋಕೋಪಯೋಗಿ ಇಲಾಖೆಯಿಂದ ಅನುದಾನ ಮೀಸಲಿಡಲಾಗಿದ್ದು ಟೆಂಡರ್ ಪ್ರಕ್ರಿಯೆ ಮುಗಿದಿದೆ. ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು ಎಂದರು. ಉಳ್ಳಾಲದ ಕೋಟೆಪುರ, ಅಂಬಿಕಾ ರೋಡ್, ಉಳ್ಳಾಲ ಬೈಲ್ ಸೇರಿದಂತೆ ಅನೇಕ ಕಡೆ ಹೈಮಾಸ್ಟ್ ದೀಪಗಳನ್ನ ಅಳವಡಿಸಲಾಗುತ್ತಿದೆ ಎಂದರು.


ಉಳ್ಳಾಲ ನಗರಸಭೆ ಅಧ್ಯಕ್ಷರಾದ ಚಿತ್ರಕಲಾ ಚಂದ್ರಕಾಂತ್, ಉಪಾಧ್ಯಕ್ಷರಾದ ಆಯೂಬ್ ಮಂಚಿಲ, ನಗರಸಭಾ ಆಯುಕ್ತರಾದ ರಾಯಪ್ಪ, ಉಳ್ಳಾಲ ನಗರಸಭಾ ಮಾಜಿ ಅಧ್ಯಕ್ಷರಾದ ಮಹಮ್ಮದ್ ಮುಕ್ಕಚ್ಚೇರಿ, ಯು.ಎ ಇಸ್ಮಾಯಿಲ್, ಭಾಝಿಲ್ ಡಿಸೋಜ, ಸದಸ್ಯರಾದ ಭಾರತಿ, ಶಶಿಕಲಾ, ಸಪ್ನ ಹರೀಶ್, ವೀಣಾ ಡಿಸೋಜ, ರವಿಚಂದ್ರ ಗಟ್ಟಿ,ಪ್ರಮುಖರಾದ ಇಬ್ರಾಹಿಂ ,ಅಶ್ರಫ್,ಅಝೀಝ್ ಕೋಡಿ ,ಸುರೇಶ್ ಭಟ್ನಗರ ,ಮಹಿಳಾ ಕಾಂಗ್ರೆಸ್ನ ದೇವಕಿ,ಮುಸ್ತಫಾ ಅಬ್ದುಲ್ಲ, ಅದ್ದಾಮ ಮೇಲಂಗಡಿ,ರಫೀಕ್ ಮೇಲಂಗಡಿ,ಜಾಫರ್,ಲೋಕೋಪಯೋಗಿ ಇಂಜಿನಿಯರ್ ದಾಸ್ ಪ್ರಕಾಶ್, ಎ.ಇ ಚಂದ್ರಶೇಖರಯ್ಯ ಮೊದಲಾದವರು ಉಪಸ್ಥಿತರಿದ್ದರು.
Ullal Bike cycle riders get separate track founding laid by MLA UT Khader. The track will lead from Abbakka circle to Thokottu over bridge.
02-04-26 03:56 pm
HK News Staffer
ಮಗನ ರೋಗ ಗುಣಪಡಿಸಲು ಸ್ವಂತ ಮಗಳನ್ನೇ ಕೊಂದ ತಾಯಿ! ಮ...
02-04-26 02:46 pm
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm