ಬ್ರೇಕಿಂಗ್ ನ್ಯೂಸ್
30-09-21 02:53 pm Mangaluru Correspondent ಕರಾವಳಿ
ಬೆಳ್ತಂಗಡಿ, ಸೆ.30: ಹತ್ತನೇ ತರಗತಿ ಓದುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕೇಸು ದಾಖಲಾಗಿದೆ.
ಹುಡುಗಿ ದೂರಿನ ಪ್ರಕಾರ, ತನ್ನ ಮನೆ ಸಮೀಪದಲ್ಲಿ ಜೆಸಿಬಿ ಕಾಮಗಾರಿ ನಡೆಸುತ್ತಿದ್ದ ಅದರ ಚಾಲಕ ರವೀಂದ್ರ ಎಂಬಾತ ಕಳೆದ ಫೆಬ್ರವರಿಯಲ್ಲಿ ಲಾಕ್ಡೌನ್ ಇದ್ದಾಗ ತನ್ನೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಎರಡು - ಮೂರು ಬಾರಿ ರಸ್ತೆಯ ಮೋರಿಯಡಿಯಲ್ಲಿ ಬಲಾತ್ಕಾರ ನಡೆಸಿದ್ದಾನೆ. ಇದಲ್ಲದೆ, ಪಕ್ಕದ ಕಾಡಿಗೆ ಒಯ್ದು ದೈಹಿಕ ಸಂಪರ್ಕ ನಡೆಸಿದ್ದಾನೆ. ಇದಕ್ಕೂ ಮುನ್ನ ಸಂಬಂಧಿಕ ಕೊಕ್ರಾಡಿ ನಿವಾಸಿ ಯೋಗೀಶ್ ಎಂಬಾತ 2020ರ ಎಪ್ರಿಲ್ ತಿಂಗಳಲ್ಲಿ ಎರಡು ಬಾರಿ ದೈಹಿಕ ಸಂಪರ್ಕ ನಡೆಸಿದ್ದಾನೆ.

ಲಾಕ್ಡೌನ್ ಬಳಿಕ ಇತ್ತೀಚೆಗೆ ಶಾಲೆಗೆ ತೆರಳಿದ್ದು, ಅಲ್ಲಿಗೆ ಇಂಜೆಕ್ಷನ್ ಕೊಡಲೆಂದು ಬಂದಿದ್ದ ವೈದ್ಯರು ತನ್ನ ದೇಹಸ್ಥಿತಿಯನ್ನು ಗಮನಿಸಿ ಪರೀಕ್ಷೆ ನಡೆಸುವಂತೆ ತಿಳಿಸಿದ್ದರು. ಸೆ.27ರಂದು ವೈದ್ಯರಲ್ಲಿ ಪರೀಕ್ಷೆ ನಡೆಸಿದಾಗ, ಏಳು ತಿಂಗಳ ಗರ್ಭಿಣಿಯಾಗಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿಯ ವೈದ್ಯರು ಸ್ಕ್ಯಾನಿಂಗ್ ನಡೆಸಿ, ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆ. ತನ್ನನ್ನು ಬಲಾತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ, ಗರ್ಭಿಣಿಯಾಗಲು ಕಾರಣವಾಗಿರುವ ರವೀಂದ್ರ ಮತ್ತು ಯೋಗೀಶ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
High school girl raped and becomes 7 month pregnant case filed against two in Belthanagady police station. The accused has been identified as Ravindra JCB driver and Yogish.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm