ಬ್ರೇಕಿಂಗ್ ನ್ಯೂಸ್
30-09-21 02:53 pm Mangaluru Correspondent ಕರಾವಳಿ
ಬೆಳ್ತಂಗಡಿ, ಸೆ.30: ಹತ್ತನೇ ತರಗತಿ ಓದುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕೇಸು ದಾಖಲಾಗಿದೆ.
ಹುಡುಗಿ ದೂರಿನ ಪ್ರಕಾರ, ತನ್ನ ಮನೆ ಸಮೀಪದಲ್ಲಿ ಜೆಸಿಬಿ ಕಾಮಗಾರಿ ನಡೆಸುತ್ತಿದ್ದ ಅದರ ಚಾಲಕ ರವೀಂದ್ರ ಎಂಬಾತ ಕಳೆದ ಫೆಬ್ರವರಿಯಲ್ಲಿ ಲಾಕ್ಡೌನ್ ಇದ್ದಾಗ ತನ್ನೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಎರಡು - ಮೂರು ಬಾರಿ ರಸ್ತೆಯ ಮೋರಿಯಡಿಯಲ್ಲಿ ಬಲಾತ್ಕಾರ ನಡೆಸಿದ್ದಾನೆ. ಇದಲ್ಲದೆ, ಪಕ್ಕದ ಕಾಡಿಗೆ ಒಯ್ದು ದೈಹಿಕ ಸಂಪರ್ಕ ನಡೆಸಿದ್ದಾನೆ. ಇದಕ್ಕೂ ಮುನ್ನ ಸಂಬಂಧಿಕ ಕೊಕ್ರಾಡಿ ನಿವಾಸಿ ಯೋಗೀಶ್ ಎಂಬಾತ 2020ರ ಎಪ್ರಿಲ್ ತಿಂಗಳಲ್ಲಿ ಎರಡು ಬಾರಿ ದೈಹಿಕ ಸಂಪರ್ಕ ನಡೆಸಿದ್ದಾನೆ.

ಲಾಕ್ಡೌನ್ ಬಳಿಕ ಇತ್ತೀಚೆಗೆ ಶಾಲೆಗೆ ತೆರಳಿದ್ದು, ಅಲ್ಲಿಗೆ ಇಂಜೆಕ್ಷನ್ ಕೊಡಲೆಂದು ಬಂದಿದ್ದ ವೈದ್ಯರು ತನ್ನ ದೇಹಸ್ಥಿತಿಯನ್ನು ಗಮನಿಸಿ ಪರೀಕ್ಷೆ ನಡೆಸುವಂತೆ ತಿಳಿಸಿದ್ದರು. ಸೆ.27ರಂದು ವೈದ್ಯರಲ್ಲಿ ಪರೀಕ್ಷೆ ನಡೆಸಿದಾಗ, ಏಳು ತಿಂಗಳ ಗರ್ಭಿಣಿಯಾಗಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿಯ ವೈದ್ಯರು ಸ್ಕ್ಯಾನಿಂಗ್ ನಡೆಸಿ, ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆ. ತನ್ನನ್ನು ಬಲಾತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ, ಗರ್ಭಿಣಿಯಾಗಲು ಕಾರಣವಾಗಿರುವ ರವೀಂದ್ರ ಮತ್ತು ಯೋಗೀಶ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
High school girl raped and becomes 7 month pregnant case filed against two in Belthanagady police station. The accused has been identified as Ravindra JCB driver and Yogish.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm