ಬ್ರೇಕಿಂಗ್ ನ್ಯೂಸ್
30-09-21 02:53 pm Mangaluru Correspondent ಕರಾವಳಿ
ಬೆಳ್ತಂಗಡಿ, ಸೆ.30: ಹತ್ತನೇ ತರಗತಿ ಓದುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕೇಸು ದಾಖಲಾಗಿದೆ.
ಹುಡುಗಿ ದೂರಿನ ಪ್ರಕಾರ, ತನ್ನ ಮನೆ ಸಮೀಪದಲ್ಲಿ ಜೆಸಿಬಿ ಕಾಮಗಾರಿ ನಡೆಸುತ್ತಿದ್ದ ಅದರ ಚಾಲಕ ರವೀಂದ್ರ ಎಂಬಾತ ಕಳೆದ ಫೆಬ್ರವರಿಯಲ್ಲಿ ಲಾಕ್ಡೌನ್ ಇದ್ದಾಗ ತನ್ನೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಎರಡು - ಮೂರು ಬಾರಿ ರಸ್ತೆಯ ಮೋರಿಯಡಿಯಲ್ಲಿ ಬಲಾತ್ಕಾರ ನಡೆಸಿದ್ದಾನೆ. ಇದಲ್ಲದೆ, ಪಕ್ಕದ ಕಾಡಿಗೆ ಒಯ್ದು ದೈಹಿಕ ಸಂಪರ್ಕ ನಡೆಸಿದ್ದಾನೆ. ಇದಕ್ಕೂ ಮುನ್ನ ಸಂಬಂಧಿಕ ಕೊಕ್ರಾಡಿ ನಿವಾಸಿ ಯೋಗೀಶ್ ಎಂಬಾತ 2020ರ ಎಪ್ರಿಲ್ ತಿಂಗಳಲ್ಲಿ ಎರಡು ಬಾರಿ ದೈಹಿಕ ಸಂಪರ್ಕ ನಡೆಸಿದ್ದಾನೆ.
ಲಾಕ್ಡೌನ್ ಬಳಿಕ ಇತ್ತೀಚೆಗೆ ಶಾಲೆಗೆ ತೆರಳಿದ್ದು, ಅಲ್ಲಿಗೆ ಇಂಜೆಕ್ಷನ್ ಕೊಡಲೆಂದು ಬಂದಿದ್ದ ವೈದ್ಯರು ತನ್ನ ದೇಹಸ್ಥಿತಿಯನ್ನು ಗಮನಿಸಿ ಪರೀಕ್ಷೆ ನಡೆಸುವಂತೆ ತಿಳಿಸಿದ್ದರು. ಸೆ.27ರಂದು ವೈದ್ಯರಲ್ಲಿ ಪರೀಕ್ಷೆ ನಡೆಸಿದಾಗ, ಏಳು ತಿಂಗಳ ಗರ್ಭಿಣಿಯಾಗಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿಯ ವೈದ್ಯರು ಸ್ಕ್ಯಾನಿಂಗ್ ನಡೆಸಿ, ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆ. ತನ್ನನ್ನು ಬಲಾತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ, ಗರ್ಭಿಣಿಯಾಗಲು ಕಾರಣವಾಗಿರುವ ರವೀಂದ್ರ ಮತ್ತು ಯೋಗೀಶ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
High school girl raped and becomes 7 month pregnant case filed against two in Belthanagady police station. The accused has been identified as Ravindra JCB driver and Yogish.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm