ಬ್ರೇಕಿಂಗ್ ನ್ಯೂಸ್
30-09-21 02:53 pm Mangaluru Correspondent ಕರಾವಳಿ
ಬೆಳ್ತಂಗಡಿ, ಸೆ.30: ಹತ್ತನೇ ತರಗತಿ ಓದುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕೇಸು ದಾಖಲಾಗಿದೆ.
ಹುಡುಗಿ ದೂರಿನ ಪ್ರಕಾರ, ತನ್ನ ಮನೆ ಸಮೀಪದಲ್ಲಿ ಜೆಸಿಬಿ ಕಾಮಗಾರಿ ನಡೆಸುತ್ತಿದ್ದ ಅದರ ಚಾಲಕ ರವೀಂದ್ರ ಎಂಬಾತ ಕಳೆದ ಫೆಬ್ರವರಿಯಲ್ಲಿ ಲಾಕ್ಡೌನ್ ಇದ್ದಾಗ ತನ್ನೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಎರಡು - ಮೂರು ಬಾರಿ ರಸ್ತೆಯ ಮೋರಿಯಡಿಯಲ್ಲಿ ಬಲಾತ್ಕಾರ ನಡೆಸಿದ್ದಾನೆ. ಇದಲ್ಲದೆ, ಪಕ್ಕದ ಕಾಡಿಗೆ ಒಯ್ದು ದೈಹಿಕ ಸಂಪರ್ಕ ನಡೆಸಿದ್ದಾನೆ. ಇದಕ್ಕೂ ಮುನ್ನ ಸಂಬಂಧಿಕ ಕೊಕ್ರಾಡಿ ನಿವಾಸಿ ಯೋಗೀಶ್ ಎಂಬಾತ 2020ರ ಎಪ್ರಿಲ್ ತಿಂಗಳಲ್ಲಿ ಎರಡು ಬಾರಿ ದೈಹಿಕ ಸಂಪರ್ಕ ನಡೆಸಿದ್ದಾನೆ.

ಲಾಕ್ಡೌನ್ ಬಳಿಕ ಇತ್ತೀಚೆಗೆ ಶಾಲೆಗೆ ತೆರಳಿದ್ದು, ಅಲ್ಲಿಗೆ ಇಂಜೆಕ್ಷನ್ ಕೊಡಲೆಂದು ಬಂದಿದ್ದ ವೈದ್ಯರು ತನ್ನ ದೇಹಸ್ಥಿತಿಯನ್ನು ಗಮನಿಸಿ ಪರೀಕ್ಷೆ ನಡೆಸುವಂತೆ ತಿಳಿಸಿದ್ದರು. ಸೆ.27ರಂದು ವೈದ್ಯರಲ್ಲಿ ಪರೀಕ್ಷೆ ನಡೆಸಿದಾಗ, ಏಳು ತಿಂಗಳ ಗರ್ಭಿಣಿಯಾಗಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿಯ ವೈದ್ಯರು ಸ್ಕ್ಯಾನಿಂಗ್ ನಡೆಸಿ, ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆ. ತನ್ನನ್ನು ಬಲಾತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ, ಗರ್ಭಿಣಿಯಾಗಲು ಕಾರಣವಾಗಿರುವ ರವೀಂದ್ರ ಮತ್ತು ಯೋಗೀಶ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
High school girl raped and becomes 7 month pregnant case filed against two in Belthanagady police station. The accused has been identified as Ravindra JCB driver and Yogish.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm