ಬ್ರೇಕಿಂಗ್ ನ್ಯೂಸ್
10-09-20 06:17 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 10: ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ವಿಟ್ಲ ಪಿಂಡಿ ಉತ್ಸವ ಅತ್ಯಂತ ಸರಳವಾಗಿ ನಡೆದಿದೆ.
ಪರ್ಯಾಯ ಸ್ವಾಮೀಜಿ ಈಶಪ್ರೀಯ ಶ್ರೀಪಾದರು ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ ಮಾಡಿದರು. ಅಲ್ಲದೆ, ವಿಟ್ಲ ಪಿಂಡಿ ಪ್ರಯುಕ್ತ ಶ್ರೀಕೃಷ್ಣನಿಗೆ ಇಂದು ಬಾಲಕೃಷ್ಣನ ಅಲಂಕಾರ ಮಾಡಲಾಗಿತ್ತು. ಕೃಷ್ಣನ ಮೂರ್ತಿಯ ಮುಂದೆ ಚಿನ್ನದ ತೊಟ್ಟಿಲಿಟ್ಟು ಸ್ವಾಮೀಜಿ ಕೃಷ್ಣನನ್ನು ವಿಶೇಷವಾಗಿ ಅಲಂಕರಿಸಿದರು. ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಶ್ರೀಗಳು ವಿಶೇಷ ಅಲಂಕಾರವನ್ನು ಮಾಡಿದ್ದಾರೆ.



ಅದಮಾರು ಮಠದ ಸ್ವಾಮೀಜಿ ಅಷ್ಟಮಿಯ ವಿಟ್ಲ ಪಿಂಡಿ ಪ್ರಯುಕ್ತ ಮಹಾಪೂಜೆ ನೆರವೇರಿಸಿದರು. ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು. ಕೃಷ್ಣಮಠದ ಸಿಬಂದಿ, ಅರ್ಚಕರು, ಸ್ವಾಮೀಜಿಗಳ ವಿನಾ ಬೇರೆ ಯಾರಿಗೂ ವಿಟ್ಲ ಪಿಂಡಿ ಉತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ಇರಲಿಲ್ಲ. ಹೊರಭಾಗದಲ್ಲಿ ಹೊರಗಿನ ಜನರು ಬರದಂತೆ ಪೊಲೀಸರು ಭದ್ರತೆ ಏರ್ಪಡಿಸಿದ್ದರು.
ಕೃಷ್ಣಾಷ್ಟಮಿ ಪ್ರಯುಕ್ತ ಸೆ.11ರಂದು ಮಧ್ಯಾಹ್ನ 3ರಿಂದ ಶ್ರೀಕೃಷ್ಣ ಲೀಲೋತ್ಸವ ನಡೆಯಲಿದ್ದು, ಜನದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಮಧ್ಯಾಹ್ನ 12.30ರಿಂದ ಸಾಯಂಕಾಲ 5.30ರವರೆಗೆ ರಥಬೀದಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾಗಿ ಕೃಷ್ಣ ಮಠದ ಪ್ರಕಟಣೆ ತಿಳಿಸಿದೆ. ಇನ್ನೊಂದೆಡೆ, ಪರ್ಯಾಯ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಆಶಯದಂತೆ ಕೃಷ್ಣ ಪ್ರಸಾದ ವಿತರಣೆಗಾಗಿ ಮಠದಲ್ಲಿ ಒಂದು ಲಕ್ಷ ಉಂಡೆ ಹಾಗೂ ಒಂದು ಲಕ್ಷ ಚಕ್ಕುಲಿ ತಯಾರಿಸಲಾಗುತ್ತಿದೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm