ಬ್ರೇಕಿಂಗ್ ನ್ಯೂಸ್
10-09-20 06:17 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 10: ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ವಿಟ್ಲ ಪಿಂಡಿ ಉತ್ಸವ ಅತ್ಯಂತ ಸರಳವಾಗಿ ನಡೆದಿದೆ.
ಪರ್ಯಾಯ ಸ್ವಾಮೀಜಿ ಈಶಪ್ರೀಯ ಶ್ರೀಪಾದರು ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ ಮಾಡಿದರು. ಅಲ್ಲದೆ, ವಿಟ್ಲ ಪಿಂಡಿ ಪ್ರಯುಕ್ತ ಶ್ರೀಕೃಷ್ಣನಿಗೆ ಇಂದು ಬಾಲಕೃಷ್ಣನ ಅಲಂಕಾರ ಮಾಡಲಾಗಿತ್ತು. ಕೃಷ್ಣನ ಮೂರ್ತಿಯ ಮುಂದೆ ಚಿನ್ನದ ತೊಟ್ಟಿಲಿಟ್ಟು ಸ್ವಾಮೀಜಿ ಕೃಷ್ಣನನ್ನು ವಿಶೇಷವಾಗಿ ಅಲಂಕರಿಸಿದರು. ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಶ್ರೀಗಳು ವಿಶೇಷ ಅಲಂಕಾರವನ್ನು ಮಾಡಿದ್ದಾರೆ.



ಅದಮಾರು ಮಠದ ಸ್ವಾಮೀಜಿ ಅಷ್ಟಮಿಯ ವಿಟ್ಲ ಪಿಂಡಿ ಪ್ರಯುಕ್ತ ಮಹಾಪೂಜೆ ನೆರವೇರಿಸಿದರು. ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು. ಕೃಷ್ಣಮಠದ ಸಿಬಂದಿ, ಅರ್ಚಕರು, ಸ್ವಾಮೀಜಿಗಳ ವಿನಾ ಬೇರೆ ಯಾರಿಗೂ ವಿಟ್ಲ ಪಿಂಡಿ ಉತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ಇರಲಿಲ್ಲ. ಹೊರಭಾಗದಲ್ಲಿ ಹೊರಗಿನ ಜನರು ಬರದಂತೆ ಪೊಲೀಸರು ಭದ್ರತೆ ಏರ್ಪಡಿಸಿದ್ದರು.
ಕೃಷ್ಣಾಷ್ಟಮಿ ಪ್ರಯುಕ್ತ ಸೆ.11ರಂದು ಮಧ್ಯಾಹ್ನ 3ರಿಂದ ಶ್ರೀಕೃಷ್ಣ ಲೀಲೋತ್ಸವ ನಡೆಯಲಿದ್ದು, ಜನದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಮಧ್ಯಾಹ್ನ 12.30ರಿಂದ ಸಾಯಂಕಾಲ 5.30ರವರೆಗೆ ರಥಬೀದಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾಗಿ ಕೃಷ್ಣ ಮಠದ ಪ್ರಕಟಣೆ ತಿಳಿಸಿದೆ. ಇನ್ನೊಂದೆಡೆ, ಪರ್ಯಾಯ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಆಶಯದಂತೆ ಕೃಷ್ಣ ಪ್ರಸಾದ ವಿತರಣೆಗಾಗಿ ಮಠದಲ್ಲಿ ಒಂದು ಲಕ್ಷ ಉಂಡೆ ಹಾಗೂ ಒಂದು ಲಕ್ಷ ಚಕ್ಕುಲಿ ತಯಾರಿಸಲಾಗುತ್ತಿದೆ.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm