ಬ್ರೇಕಿಂಗ್ ನ್ಯೂಸ್
10-09-20 06:17 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 10: ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ವಿಟ್ಲ ಪಿಂಡಿ ಉತ್ಸವ ಅತ್ಯಂತ ಸರಳವಾಗಿ ನಡೆದಿದೆ.
ಪರ್ಯಾಯ ಸ್ವಾಮೀಜಿ ಈಶಪ್ರೀಯ ಶ್ರೀಪಾದರು ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ ಮಾಡಿದರು. ಅಲ್ಲದೆ, ವಿಟ್ಲ ಪಿಂಡಿ ಪ್ರಯುಕ್ತ ಶ್ರೀಕೃಷ್ಣನಿಗೆ ಇಂದು ಬಾಲಕೃಷ್ಣನ ಅಲಂಕಾರ ಮಾಡಲಾಗಿತ್ತು. ಕೃಷ್ಣನ ಮೂರ್ತಿಯ ಮುಂದೆ ಚಿನ್ನದ ತೊಟ್ಟಿಲಿಟ್ಟು ಸ್ವಾಮೀಜಿ ಕೃಷ್ಣನನ್ನು ವಿಶೇಷವಾಗಿ ಅಲಂಕರಿಸಿದರು. ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಶ್ರೀಗಳು ವಿಶೇಷ ಅಲಂಕಾರವನ್ನು ಮಾಡಿದ್ದಾರೆ.
ಅದಮಾರು ಮಠದ ಸ್ವಾಮೀಜಿ ಅಷ್ಟಮಿಯ ವಿಟ್ಲ ಪಿಂಡಿ ಪ್ರಯುಕ್ತ ಮಹಾಪೂಜೆ ನೆರವೇರಿಸಿದರು. ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು. ಕೃಷ್ಣಮಠದ ಸಿಬಂದಿ, ಅರ್ಚಕರು, ಸ್ವಾಮೀಜಿಗಳ ವಿನಾ ಬೇರೆ ಯಾರಿಗೂ ವಿಟ್ಲ ಪಿಂಡಿ ಉತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ಇರಲಿಲ್ಲ. ಹೊರಭಾಗದಲ್ಲಿ ಹೊರಗಿನ ಜನರು ಬರದಂತೆ ಪೊಲೀಸರು ಭದ್ರತೆ ಏರ್ಪಡಿಸಿದ್ದರು.
ಕೃಷ್ಣಾಷ್ಟಮಿ ಪ್ರಯುಕ್ತ ಸೆ.11ರಂದು ಮಧ್ಯಾಹ್ನ 3ರಿಂದ ಶ್ರೀಕೃಷ್ಣ ಲೀಲೋತ್ಸವ ನಡೆಯಲಿದ್ದು, ಜನದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಮಧ್ಯಾಹ್ನ 12.30ರಿಂದ ಸಾಯಂಕಾಲ 5.30ರವರೆಗೆ ರಥಬೀದಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾಗಿ ಕೃಷ್ಣ ಮಠದ ಪ್ರಕಟಣೆ ತಿಳಿಸಿದೆ. ಇನ್ನೊಂದೆಡೆ, ಪರ್ಯಾಯ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಆಶಯದಂತೆ ಕೃಷ್ಣ ಪ್ರಸಾದ ವಿತರಣೆಗಾಗಿ ಮಠದಲ್ಲಿ ಒಂದು ಲಕ್ಷ ಉಂಡೆ ಹಾಗೂ ಒಂದು ಲಕ್ಷ ಚಕ್ಕುಲಿ ತಯಾರಿಸಲಾಗುತ್ತಿದೆ.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 09:23 pm
Mangaluru staff
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm