ಬ್ರೇಕಿಂಗ್ ನ್ಯೂಸ್
04-10-21 03:51 pm Mangaluru Correspondent ಕರಾವಳಿ
ಸುಳ್ಯ, ಅ.4: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೊನೆಗೂ ವಾರಂಟ್ ಪ್ರಕರಣದಲ್ಲಿ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ. ಅ.5ರಂದು ಬೆಳಗ್ಗೆ 11.30ಕ್ಕೆ ಸುಳ್ಯ ನ್ಯಾಯಾಲಯಕ್ಕೆ ಸ್ವತಃ ಡಿಕೆಶಿ ಹಾಜರಾಗಲಿದ್ದು, ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲಿದ್ದಾರೆ.
ಸಾಯಿ ಗಿರಿಧರ್ ರೈ ಎಂಬವರು ಸುಳ್ಯದಲ್ಲಿ ವಿದ್ಯುತ್ ಕೈಕೊಡುತ್ತಿದ್ದ ಬಗ್ಗೆ ಆರು ವರ್ಷಗಳ ಹಿಂದೆ ಆಗಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಗೆ ಫೋನ್ ಮಾಡಿ ಬೈದಿದ್ದರು. ಆನಂತರ, ಸಚಿವ ಡಿಕೆಶಿ ಸುಳ್ಯ ಎಇ ಮೂಲಕ ಗಿರಿಧರ್ ರೈ ವಿರುದ್ಧ ಪೊಲೀಸ್ ಕೇಸು ದಾಖಲಿಸಿದ್ದರು. ಪ್ರಕರಣ ಈಗ ಸುಳ್ಯ ನ್ಯಾಯಾಲಯದಲ್ಲಿದ್ದು, ನ್ಯಾಯಾಧೀಶರು ಸಾಕ್ಷಿದಾರ ಡಿಕೆಶಿಗೆ ಕೋರ್ಟಿಗೆ ಹಾಜರಾಗಿ ಹೇಳಿಕೆ ನೀಡುವಂತೆ ವಾರಂಟ್ ನೀಡಿದ್ದರು. ಮೂರು ಬಾರಿ ವಾರಂಟ್ ನೀಡಿದರೂ, ಕೋರ್ಟಿಗೆ ಹಾಜರಾಗದೆ ತಪ್ಪಿಸಿಕೊಂಡಿದ್ದರಿಂದ ನ್ಯಾಯಾಧೀಶರು ಗರಂ ಆಗಿದ್ದರು.
ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಲೇ ಎಚ್ಚೆತ್ತ ಡಿಕೆಶಿ, ಅ.5ರಂದು ಸುಳ್ಯ ನ್ಯಾಯಾಲಯಕ್ಕ ಹಾಜರಾಗಲು ನಿರ್ಧರಿಸಿದ್ದಾರೆ. ಇದರ ಜೊತೆಗೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದು ಹೋಗಲು ಪ್ಲಾನ್ ಹಾಕಿದ್ದಾರೆ. ಬೆಂಗಳೂರಿನಿಂದ ಬೆಳಗ್ಗೆ ಎಂಟುಪ ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿರುವ ಡಿಕೆಶಿ, ಅಲ್ಲಿಂದ ರಸ್ತೆ ಮೂಲಕ ಸುಳ್ಯಕ್ಕೆ ತೆರಳಲಿದ್ದಾರೆ. ಆನಂತರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದ್ದು ಮಧ್ಯಾಹ್ನ ಪೂಜೆ ಬಳಿಕ ಮೂರು ಗಂಟೆಗೆ ಅಲ್ಲಿಂದ ನಿರ್ಗಮಿಸಿ ಸಂಜೆ 5 ಗಂಟೆಗೆ ಮಂಗಳೂರು ತಲುಪಲಿದ್ದಾರೆ. ರಾತ್ರಿ ಎಂಟು ಗಂಟೆ ವಿಮಾನದಲ್ಲಿ ಮರಳಿ ಬೆಂಗಳೂರಿಗೆ ತೆರಳಲಿದ್ದಾರೆ.
Karnataka Pradesh Congress Committee (KPCC) president D K Shivakumar will attend a court hearing at 11.30 am on October 5 as a witness with regards to a telephonic conversation case that was held between him and Sai Giridhar, a resident of Bellare six years ago.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm