ಬ್ರೇಕಿಂಗ್ ನ್ಯೂಸ್
06-10-21 10:57 am Mangaluru Correspondent ಕರಾವಳಿ
ಮಂಗಳೂರು, ಅ.6: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನಗರದ ಕಾಲೇಜು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಮೃತ ವಿದ್ಯಾರ್ಥಿನಿ. ಕೊಲಾಸೋ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದ ನೀನಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ಮಂಗಳವಾರ ಸಂಜೆ ಹಾಸ್ಟೆಲ್ ಕೊಠಡಿಯ ಬಾತ್ ರೂಮಿನಲ್ಲಿ ಈಕೆ ನೇಣು ಬಿಗಿದುಕೊಂಡಿದ್ದಾಳೆ. ನೇಣು ಹಾಕಿದ್ದನ್ನು ನೋಡಿದ ಜೊತೆಗಿದ್ದ ಇನ್ನೊಬ್ಬ ಹುಡುಗಿ ಆಘಾತಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಅಲ್ಲಿನ ಸಿಬಂದಿ ನೇಣು ಕುಣಿಕೆಯಿಂದ ತೆಗೆದು ನೀನಾ ಮತ್ತು ಪ್ರಜ್ಞೆ ಕಳಕೊಂಡಿದ್ದ ಇನ್ನೊಬ್ಬ ಹುಡುಗಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ನೀನಾ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ಹಾಸ್ಟೆಲ್ ನಲ್ಲಿ ನೀಡುತ್ತಿದ್ದ ಮಾನಸಿಕ ಕಿರುಕುಳವೇ ಕಾರಣ ಎಂದು ಇತರ ವಿದ್ಯಾರ್ಥಿಗಳು ದೂರಿದ್ದಾರೆ. ಮನೆಯವರ ಜೊತೆ ಮಾತನಾಡುವುದಕ್ಕೆ, ಮೊಬೈಲ್ ಬಳಕೆ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಾಲೇಜು ಆಡಳಿತಕ್ಕೆ ಕೇರಳದಿಂದ ವಿದ್ಯಾರ್ಥಿಗಳನ್ನು ಪೂರೈಸುವ ಏಜಂಟ್ ಒಬ್ಬ ಹಾಸ್ಟೆಲ್ ನಡೆಸುತ್ತಿದ್ದ ಎನ್ನಲಾಗುತ್ತಿದೆ. ಆತ ಕೂಡ ಕೇರಳ ಮೂಲದ ವ್ಯಕ್ತಿಯೇ ಆಗಿದ್ದು ವಿದ್ಯಾರ್ಥಿಗಳಿಗೆ ನಿರ್ಬಂಧ ನೆಪದಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ದೂರಿದ್ದಾರೆ.
ವಿದ್ಯಾರ್ಥಿನಿ ನೀನಾ ಡೈರಿ ಬರೆಯುವ ಅಭ್ಯಾಸ ಹೊಂದಿದ್ದು ಈ ಬಗ್ಗೆ ಡೈರಿಯಲ್ಲಿ ಬರೆದುಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆ ಬಗ್ಗೆ ಡೆತ್ ನೋಟ್ ರೂಪದಲ್ಲಿ ಅದರಲ್ಲಿ ಬರೆದಿದ್ದಾಳೆಯೇ ಎಂಬುದು ತಿಳಿದುಬಂದಿಲ್ಲ.
Mangalore Colaco nursing college student commits suicide in hostel Mental torture by officials suspected. The deceased has been identified as Neena (21) resident of Kannur.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
03-10-25 04:50 pm
HK News Desk
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
03-10-25 02:11 pm
Mangalore Correspondent
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm