ಬ್ರೇಕಿಂಗ್ ನ್ಯೂಸ್
06-10-21 10:57 am Mangaluru Correspondent ಕರಾವಳಿ
ಮಂಗಳೂರು, ಅ.6: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನಗರದ ಕಾಲೇಜು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಮೃತ ವಿದ್ಯಾರ್ಥಿನಿ. ಕೊಲಾಸೋ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದ ನೀನಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ಮಂಗಳವಾರ ಸಂಜೆ ಹಾಸ್ಟೆಲ್ ಕೊಠಡಿಯ ಬಾತ್ ರೂಮಿನಲ್ಲಿ ಈಕೆ ನೇಣು ಬಿಗಿದುಕೊಂಡಿದ್ದಾಳೆ. ನೇಣು ಹಾಕಿದ್ದನ್ನು ನೋಡಿದ ಜೊತೆಗಿದ್ದ ಇನ್ನೊಬ್ಬ ಹುಡುಗಿ ಆಘಾತಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಅಲ್ಲಿನ ಸಿಬಂದಿ ನೇಣು ಕುಣಿಕೆಯಿಂದ ತೆಗೆದು ನೀನಾ ಮತ್ತು ಪ್ರಜ್ಞೆ ಕಳಕೊಂಡಿದ್ದ ಇನ್ನೊಬ್ಬ ಹುಡುಗಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ನೀನಾ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ಹಾಸ್ಟೆಲ್ ನಲ್ಲಿ ನೀಡುತ್ತಿದ್ದ ಮಾನಸಿಕ ಕಿರುಕುಳವೇ ಕಾರಣ ಎಂದು ಇತರ ವಿದ್ಯಾರ್ಥಿಗಳು ದೂರಿದ್ದಾರೆ. ಮನೆಯವರ ಜೊತೆ ಮಾತನಾಡುವುದಕ್ಕೆ, ಮೊಬೈಲ್ ಬಳಕೆ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಾಲೇಜು ಆಡಳಿತಕ್ಕೆ ಕೇರಳದಿಂದ ವಿದ್ಯಾರ್ಥಿಗಳನ್ನು ಪೂರೈಸುವ ಏಜಂಟ್ ಒಬ್ಬ ಹಾಸ್ಟೆಲ್ ನಡೆಸುತ್ತಿದ್ದ ಎನ್ನಲಾಗುತ್ತಿದೆ. ಆತ ಕೂಡ ಕೇರಳ ಮೂಲದ ವ್ಯಕ್ತಿಯೇ ಆಗಿದ್ದು ವಿದ್ಯಾರ್ಥಿಗಳಿಗೆ ನಿರ್ಬಂಧ ನೆಪದಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ದೂರಿದ್ದಾರೆ.
ವಿದ್ಯಾರ್ಥಿನಿ ನೀನಾ ಡೈರಿ ಬರೆಯುವ ಅಭ್ಯಾಸ ಹೊಂದಿದ್ದು ಈ ಬಗ್ಗೆ ಡೈರಿಯಲ್ಲಿ ಬರೆದುಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆ ಬಗ್ಗೆ ಡೆತ್ ನೋಟ್ ರೂಪದಲ್ಲಿ ಅದರಲ್ಲಿ ಬರೆದಿದ್ದಾಳೆಯೇ ಎಂಬುದು ತಿಳಿದುಬಂದಿಲ್ಲ.
Mangalore Colaco nursing college student commits suicide in hostel Mental torture by officials suspected. The deceased has been identified as Neena (21) resident of Kannur.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm