ಬ್ರೇಕಿಂಗ್ ನ್ಯೂಸ್
06-10-21 02:32 pm Mangaluru Correspondent ಕರಾವಳಿ
ಉಳ್ಳಾಲ, ಅ.6: ರಾಜ್ಯ, ರಾಷ್ಟ್ರ ಮಟ್ಟದ ನಾಯಕರು ಸೆಕ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಮಾಧ್ಯಮದಲ್ಲಿ ಸದ್ದು ಮಾಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪಂಚಾಯತ್ ಕಚೇರಿಯಲ್ಲಿ ಹಿರಿಯ ಸದಸ್ಯನೊಬ್ಬನ ರಾಸಲೀಲೆಯ ಸುದ್ದಿ ಜಾಲತಾಣಗಳಲ್ಲಿ ಸದ್ದು ಮಾಡಿದೆ.
ಮುನ್ನೂರು ಗ್ರಾಮ ಪಂಚಾಯತ್ ಕಚೇರಿಯ ಬಿಜೆಪಿ ಬೆಂಬಲಿತ, 75ರ ಹರೆಯದ ಹಿರಿಯ ಸದಸ್ಯರೊಬ್ಬರು ಗ್ರಾಮ ಪಂಚಾಯತ್ ಅಧ್ಯಕ್ಷರ ಕೊಠಡಿಯಲ್ಲೇ ಬಡ ಮಹಿಳೆಯನ್ನು ತಮ್ಮ ಕಾಮಚೇಷ್ಟೆಗೆ ಬಳಸಿಕೊಂಡಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಕಚೇರಿ ಒಳಗಡೆ ಸಿಸಿಟಿವಿ ಇರುವ ಬಗ್ಗೆ ಮಾಹಿತಿ ತಿಳಿಯದೆ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾನೆ ಎನ್ನಲಾಗುತ್ತಿದ್ದು, ಹತ್ತು ದಿನಗಳ ಹಿಂದೆ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ನಿವೇಶನಕ್ಕೆ ಅರ್ಜಿ ಸಲ್ಲಿಸಲು ಬಂದಿದ್ದ ಬಡ ಮಹಿಳೆಯನ್ನು 75 ವರ್ಷದ ಹಿರಿಯ ಸದಸ್ಯ, ಪಂಚಾಯತ್ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಅವರ ಕೊಠಡಿಯಲ್ಲಿ ಕುಳ್ಳಿರಿಸಿ, ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಮುದುಕನ ರಾಸಲೀಲೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಈ ಬಗ್ಗೆ ವಿಷಯ ತಿಳಿದ ಪಂಚಾಯತ್ ಅಧಿಕಾರಿಗಳು ಅಧ್ಯಕ್ಷ ವಿಲ್ಫೆಡ್ ಡಿಸೋಜ ಗಮನಕ್ಕೆ ತಂದಿದ್ದಾರೆ. ಮಹಿಳೆ ತನ್ನ ಮಕ್ಕಳೊಂದಿಗೆ ಪಂಚಾಯತ್ ಕಚೇರಿಗೆ ಬಂದಿದ್ದ ವೇಳೆ ಮಕ್ಕಳನ್ನು ಹೊರಗೆ ನಿಲ್ಲಿಸಿ, ಪಂಚಾಯತ್ ಅಧ್ಯಕ್ಷರ ಕಚೇರಿ ಒಳಗೆ ತೆರಳಿದ್ದರು. ಈ ವೇಳೆ, ಒಳಗಿದ್ದ ಹಿರಿಯ ಸದಸ್ಯ ಬಾಗಿಲು ಮುಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗುತ್ತಿದೆ.

ಘಟನೆ ನಡೆದಿರುವುದು ದೃಢಪಟ್ಟಿದ್ದರೂ, ಪಂಚಾಯತ್ ಅಧಿಕಾರಿಗಳು ಈ ಬಗ್ಗೆ ಪೊಲೀಸ್ ದೂರು ನೀಡಿಲ್ಲ. ಅಧಿಕಾರಿಗಳು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆಂದು ಆರೋಪ ಕೇಳಿಬಂದಿದೆ. ವಿಷಯ ತಿಳಿದ ಗ್ರಾಮದ ಕೆಲವು ನಿವಾಸಿಗಳು ಮತ್ತು ಡಿವೈಎಫ್ಐ ಸದಸ್ಯರು ಜಾಲತಾಣದಲ್ಲಿ ಗ್ರಾಪಂ ಸದಸ್ಯನ ಫೋಟೋ ಹಾಕಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಡ ಮಹಿಳೆಯನ್ನು ಪುಸಲಾಯಿಸಿ, ತಮ್ಮ ಕಾಮತೀಟೆ ತೀರಿಸಿಕೊಳ್ಳಲು ಸರಕಾರಿ ಕಚೇರಿಯನ್ನು ಬಳಸಿಕೊಂಡಿದ್ದು ಅಕ್ಷಮ್ಯ. ಈ ರೀತಿಯ ಗ್ರಾಮ ಸದಸ್ಯನನ್ನು ಪಂಚಾಯತ್ ಸದಸ್ಯತ್ವದಿಂದ ತೆಗೆದು ಹಾಕಬೇಕೆಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಮುನ್ನೂರು ಗ್ರಾಪಂ ಅಧ್ಯಕ್ಷ ವಿಲ್ಫ್ರೆಡ್ ಡಿಸೋಜ ಬಳಿ ಕೇಳಿದರೆ, ರಾಸಲೀಲೆ ಪ್ರಕರಣ ನಡೆದಿರುವುದು ಹೌದೆಂದು ತಿಳಿಸಿದ್ದಾರೆ. ಶುಕ್ರವಾರ ಈ ಬಗ್ಗೆ ಪಂಚಾಯತ್ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಆರೋಪಿಯ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ, ಆರೋಪಿ ಗ್ರಾಮ ಪಂಚಾಯತ್ ಸದಸ್ಯನನ್ನು ಉಚ್ಛಾಟಿಸಬೇಕೆಂದು ಒತ್ತಾಯಿಸಿ ಉಳ್ಳಾಲದ ಡಿವೈಎಫ್ಐ ನಿಯೋಗವು ಪಂಚಾಯತ್ ಅಧ್ಯಕ್ಷರಿಗೆ ಮನವಿ ನೀಡಿದೆ.
Mangalore Ullal, Munnur Grama Panchayath member, the 75-year-old man was caught in a sex scandal with a woman inside President's office. The incident has been recorded on a CCTV camera.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm