ಬ್ರೇಕಿಂಗ್ ನ್ಯೂಸ್
07-10-21 01:05 pm Mangaluru Correspondent ಕರಾವಳಿ
ಮಂಗಳೂರು, ಅ.7: ಹಿಂದುಗಳನ್ನು ಅನ್ಯಧರ್ಮೀಯರ ವಿರುದ್ಧ ಎತ್ತಿಕಟ್ಟುವ ರೀತಿ ಪ್ರಚೋದನಾತ್ಮಕವಾಗಿ ಭಾಷಣ ಮಾಡಿದ ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.
ಅ.5ರಂದು ಬಜರಂಗದಳ ಹಮ್ಮಿಕೊಂಡಿದ್ದ ಜನಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ ಪ್ರಚೋದನಕಾರಿ ಭಾಷಣ ಮಾಡಿದ್ದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಈ ಬಗ್ಗೆ ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿ ಎಂಬವರು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿ, ಚೈತ್ರಾ ಕುಂದಾಪುರ ಮತ್ತು ಕಾರ್ಯಕ್ರಮ ಹಮ್ಮಿಕೊಂಡ ಬಜರಂಗದಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ತುಳುನಾಡಿನ ವೀರಪುರುಷರಾದ ಕೋಟಿ, ಚೆನ್ನಯರ ಸುರ್ಯವನ್ನು ಬಜರಂಗದಳ ಕಾರ್ಯಕರ್ತರ ತಲ್ವಾರಿಗೆ ಹೋಲಿಸಿದ್ದು ಅಕ್ಷಮ್ಯ. ಇದು ತುಳುವರ ಧಾರ್ಮಿಕ ನಂಬಿಕೆಗೆ ಘಾಸಿ ಉಂಟು ಮಾಡುವ ಪ್ರಯತ್ನ. ಈಕೆಯ ಭಾಷಣದಿಂದ ಎರಡು ಧರ್ಮಗಳ ನಡುವೆ ದ್ವೇಷ ಹರಡಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆಯಿದೆ. ಒಂದು ಕೋಮಿನ ಜನರನ್ನು ಅವಮಾನಿಸಿದ್ದಲ್ಲದೆ, ಇನ್ನೊಂದು ಕೋಮಿನ ವಿರುದ್ಧ ಎತ್ತಿಕಟ್ಟುವ ರೀತಿ ಭಾಷಣ ಮಾಡಿರುವ ಚೈತ್ರಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೊಂಡಾಲ ಚಿತ್ತರಂಜನ್ ಶೆಟ್ಟಿ ಆಗ್ರಹಿಸಿದ್ದಾರೆ.
ಇದಲ್ಲದೆ, ಕಾಂಗ್ರೆಸ್ ಪಕ್ಷದ ಬಂಟ ಸಮುದಾಯಕ್ಕೆ ಸೇರಿದ ಮಾಜಿ ಸಚಿವರೊಬ್ಬರ ಮಗಳು ಮುಸ್ಲಿಂ ಯುವಕನ ಜೊತೆ ಪ್ರೇಮ ಸಂಬಂಧ ಹೊಂದಿದ್ದು, ಆತನನ್ನು ಮದುವೆಯಾಗಲು ಹಠ ಹಿಡಿದಿದ್ದಾಳೆಂದು ಭಾಷಣದಲ್ಲಿ ಉಲ್ಲೇಖಿಸಿ, ಅವಮಾನ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಬಗ್ಗೆ ಸುಳ್ಳು ಮಾಹಿತಿಯನ್ನು ಸಾರ್ವಜನಿಕವಾಗಿ ಹೇಳಿ, ಅವಮಾನಿಸಿದ್ದು ಅತ್ಯಂತ ಕೆಟ್ಟ ನಡವಳಿಕೆಯಾಗಿದೆ. ಇದರಿಂದ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಡಬಹುದು. ಪೊಲೀಸರ ಸಮ್ಮುಖದಲ್ಲಿಯೇ ಈ ರೀತಿಯ ಹೇಳಿಕೆ ನೀಡಿರುವುದರಿಂದ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಚಿತ್ತರಂಜನ್ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ.
ಇದೇ ವೇಳೆ, ಅಬ್ದುಲ್ ಖಾದರ್ ಎಂಬವರು ಸುರತ್ಕಲ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಚೋದನಾತ್ಮಕ ಭಾಷಣದ ಮೂಲಕ ಒಂದು ಸಮುದಾಯವನ್ನು ನಿಂದಿಸಿರುವ ಚೈತ್ರಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಕೂಡ ಪ್ರಚೋದನಕಾರಿ ಮತ್ತು ಸಮುದಾಯವನ್ನು ಎತ್ತಿಕಟ್ಟುವ ರೀತಿ ಹೇಳಿಕೆ ನೀಡಿರುವ ಚೈತ್ರಾ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
Hindu right-wing orator Chaitra Kundapura speech in Mangaluru at Surathkal hasww sparked controversy. She spoke about love jihad and religious conversions and said we need to wake up.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm